<p><strong>ಸಾಗರ</strong>: ತಾಲ್ಲೂಕಿನಲ್ಲಿ ಸೋಮವಾರ ವರುಣನ ಆರ್ಭಟ ಕಡಿಮೆಯಾಗಿದ್ದು, ಒಂದು ವಾರದ ನಂತರ ಆಗಸದಲ್ಲಿ ಕಪ್ಪು ಕಾರ್ಮೋಡಗಳ ಸ್ಥಾನದಲ್ಲಿ ಸೂರ್ಯನ ಬೆಳಕಿನ ಕಿರಣಗಳು ಕಾಣಿಸಿಕೊಂಡಿದ್ದವು.</p>.<p>ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ರೈತರು ಕೃಷಿ ಚಟುವಟಿಕೆಗಾಗಿ ಹೊಲಗದ್ದೆಗಳಿಗೆ ಇಳಿದಿದ್ದರು. ಮಂಗಳವಾರ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು ಜೋರು ಗಾಳಿ ಸಮೇತ ಮಳೆಯಾಗುತ್ತಿದೆ. </p>.<p>ತಾಳಗುಪ್ಪ ಹೋಬಳಿಯಲ್ಲಿ ವರದಾ ನದಿಯ ನೀರಿನಿಂದ ಜಲಾವೃತಗೊಂಡಿರುವ ಭತ್ತದ ಗದ್ದೆಗಳಲ್ಲಿ ನೀರಿನ ಪ್ರಮಾಣ ಇನ್ನೂ ತಗ್ಗಿಲ್ಲ. ಈ ಭಾಗದಲ್ಲಿ ಪ್ರವಾಹದ ಅಬ್ಬರ ಕಡಿಮೆಯಾಗಿದ್ದರೂ ನೀರಿನಲ್ಲಿ ಮುಳುಗಿರುವ ಬೆಳೆಗಳಿಗೆ ಮಳೆಯ ನೀರಿನಿಂದ ಬಿಡುಗಡೆ ದೊರಕಿಲ್ಲ.</p>.<p>ನಗರ ಪೊಲೀಸ್ ಠಾಣೆ ವೃತ್ತದ ಎದುರು ಜೆ.ಸಿ.ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದರ ಮೇಲೆ ಮರ ಬಿದ್ದಿದ್ದು ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಮರ ಬಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೆ ಪ್ರಾಣಾಪಾಯ ಉಂಟಾಗಿಲ್ಲ. </p>.<p>ಮಳೆಯ ಕಾರಣಕ್ಕೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಗ್ರಾಮೀಣ ಭಾಗದ ಕೆಲವೆಡೆ ರಸ್ತೆ ವಿಪರೀತ ಹಾಳಾಗಿರುವುದರಿಂದ ಆ ಭಾಗದಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ವತಿಯಿಂದ ಫಲಕ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ತಾಲ್ಲೂಕಿನಲ್ಲಿ ಸೋಮವಾರ ವರುಣನ ಆರ್ಭಟ ಕಡಿಮೆಯಾಗಿದ್ದು, ಒಂದು ವಾರದ ನಂತರ ಆಗಸದಲ್ಲಿ ಕಪ್ಪು ಕಾರ್ಮೋಡಗಳ ಸ್ಥಾನದಲ್ಲಿ ಸೂರ್ಯನ ಬೆಳಕಿನ ಕಿರಣಗಳು ಕಾಣಿಸಿಕೊಂಡಿದ್ದವು.</p>.<p>ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ರೈತರು ಕೃಷಿ ಚಟುವಟಿಕೆಗಾಗಿ ಹೊಲಗದ್ದೆಗಳಿಗೆ ಇಳಿದಿದ್ದರು. ಮಂಗಳವಾರ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು ಜೋರು ಗಾಳಿ ಸಮೇತ ಮಳೆಯಾಗುತ್ತಿದೆ. </p>.<p>ತಾಳಗುಪ್ಪ ಹೋಬಳಿಯಲ್ಲಿ ವರದಾ ನದಿಯ ನೀರಿನಿಂದ ಜಲಾವೃತಗೊಂಡಿರುವ ಭತ್ತದ ಗದ್ದೆಗಳಲ್ಲಿ ನೀರಿನ ಪ್ರಮಾಣ ಇನ್ನೂ ತಗ್ಗಿಲ್ಲ. ಈ ಭಾಗದಲ್ಲಿ ಪ್ರವಾಹದ ಅಬ್ಬರ ಕಡಿಮೆಯಾಗಿದ್ದರೂ ನೀರಿನಲ್ಲಿ ಮುಳುಗಿರುವ ಬೆಳೆಗಳಿಗೆ ಮಳೆಯ ನೀರಿನಿಂದ ಬಿಡುಗಡೆ ದೊರಕಿಲ್ಲ.</p>.<p>ನಗರ ಪೊಲೀಸ್ ಠಾಣೆ ವೃತ್ತದ ಎದುರು ಜೆ.ಸಿ.ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದರ ಮೇಲೆ ಮರ ಬಿದ್ದಿದ್ದು ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಮರ ಬಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೆ ಪ್ರಾಣಾಪಾಯ ಉಂಟಾಗಿಲ್ಲ. </p>.<p>ಮಳೆಯ ಕಾರಣಕ್ಕೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಗ್ರಾಮೀಣ ಭಾಗದ ಕೆಲವೆಡೆ ರಸ್ತೆ ವಿಪರೀತ ಹಾಳಾಗಿರುವುದರಿಂದ ಆ ಭಾಗದಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ವತಿಯಿಂದ ಫಲಕ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>