<p><strong>ಸಾಗರ:</strong> ‘ಒಂದು ಎಕರೆ ಕೃಷಿಭೂಮಿಗೆ ಒಂದು ಚೀಲದಷ್ಟು ಯೂರಿಯಾ ರಸಗೊಬ್ಬರವನ್ನು ಮಾತ್ರ ರೈತರಿಗೆ ಪೂರೈಸುವ ನಿಯಮ ರೂಪಿಸಲಾಗಿದೆ. ಇದರಿಂದ ದೇಶದ ಆಹಾರ ಭದ್ರತೆಗೆ ಕುತ್ತು ಉಂಟಾಗಲಿದೆ’ ಎಂದು ಸಂಯುಕ್ತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ದೂರಿದರು.</p>.<p>‘ರೈತ ದೇಶದ ಬೆನ್ನೆಲುಬು ಎಂದು ವೇದಿಕೆಗಳಲ್ಲಿ ಭಾಷಣ ಮಾಡುವ ರಾಜಕೀಯ ನೇತಾರರು, ಈ ರೀತಿ ಕೃಷಿ ಚಟುವಟಿಕೆಗೆ ನಿರ್ಬಂಧ ಹೇರುತ್ತಿರುವುದು ಎಷ್ಟು ಸರಿ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಕೇಂದ್ರ ಸರ್ಕಾರದ ಕ್ರಮದಿಂದಾಗಿ ಭವಿಷ್ಯದಲ್ಲಿ ಆಹಾರದ ಕೊರತೆ ಉಂಟಾಗಿ ವಿದೇಶಗಳಿಂದ ಆಹಾರ ಬೆಳೆ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಕಳೆದ ವರ್ಷ ತಾಲ್ಲೂಕಿನಲ್ಲಿ 72,000 ಚೀಲ ಯೂರಿಯಾ ಗೊಬ್ಬರದ ಸಂಗ್ರಹವಿತ್ತು. ಈ ವರ್ಷ 10,880 ಮೂಟೆ ಮಾತ್ರ ದಾಸ್ತಾನು ಇದೆ. ಇಷ್ಟು ಪ್ರಮಾಣದಲ್ಲಿ ಗೊಬ್ಬರದ ಕೊರತೆಯಾದರೆ ಈ ಭಾಗದ ಭತ್ತ, ಮೆಕ್ಕೆಜೋಳ ಬೆಳೆಯುವ ರೈತರಿಗೆ ತೀವ್ರ ತೊಂದರೆಯಾಗಲಿದೆ’ ಎಂದರು.</p>.<p>‘ದಪ್ಪ ಅಭಿಲಾಷ ತಳಿಯ ಭತ್ತದ ಬಿತ್ತನೆ ಬೀಜವನ್ನು ಈ ವರ್ಷ ಕೃಷಿ ಇಲಾಖೆಯಿಂದ ಪೂರೈಸಲಾಗುತ್ತಿಲ್ಲ. ಈ ಸಂಬಂಧ ಇಲಾಖೆ ರೈತರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಈ ತಳಿಯ ಬಿತ್ತನೆ ಬೀಜ ಸಿಗುತ್ತದೆ ಎಂಬ ನಿರೀಕ್ಷೆಯಿಂದ ಭೂಮಿ ಹದ ಮಾಡಿದ ರೈತರಿಗೆ ಕಡೆ ಗಳಿಗೆಯಲ್ಲಿ ವಿಷಯ ತಿಳಿದು ಅನನುಕೂಲವಾಗುತ್ತದೆ. ರೈತರಿಗೆ ಈ ಸಂಬಂಧ ಸಕಾಲದಲ್ಲಿ ಮಾಹಿತಿ ತಲುಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಳೆದ ವರ್ಷ ತಾಲ್ಲೂಕಿನ ಮಳೆಮಾಪನ ಕೇಂದ್ರಗಳಲ್ಲಿನ ದೋಷಗಳಿಂದ ಮಳೆಯ ಪ್ರಮಾಣ ಸರಿಯಾಗಿ ದಾಖಲಾಗದೆ ಅನೇಕ ರೈತರಿಗೆ ಬೆಳೆ ವಿಮೆ ಸೌಲಭ್ಯದ ಪ್ರಯೋಜನ ದೊರಕಿಲ್ಲ. ಈ ವರ್ಷ ಮಳೆಗಾಲಕ್ಕೆ ಮುನ್ನ ಮಳೆಮಾಪನ ಕೇಂದ್ರಗಳನ್ನು ದುರಸ್ತಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಮುಖಂಡ ಜಿನೇಶ್, ಪ್ರಮುಖರಾದ ಹೊಯ್ಸಳ ಗಣಪತಿಯಪ್ಪ, ರಾಮಪ್ಪ ಶಿರವಾಳ, ಜಯಲಕ್ಷ್ಮಿ, ಭದ್ರೇಶ್ ಬಾಳಗೋಡು, ದೇವು ಆಲಳ್ಳಿ, ಸುಂದರ್ ಸಿಂಗ್, ರಮೇಶ್ ಐಗಿನಬೈಲು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-42-1332086313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಒಂದು ಎಕರೆ ಕೃಷಿಭೂಮಿಗೆ ಒಂದು ಚೀಲದಷ್ಟು ಯೂರಿಯಾ ರಸಗೊಬ್ಬರವನ್ನು ಮಾತ್ರ ರೈತರಿಗೆ ಪೂರೈಸುವ ನಿಯಮ ರೂಪಿಸಲಾಗಿದೆ. ಇದರಿಂದ ದೇಶದ ಆಹಾರ ಭದ್ರತೆಗೆ ಕುತ್ತು ಉಂಟಾಗಲಿದೆ’ ಎಂದು ಸಂಯುಕ್ತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ದೂರಿದರು.</p>.<p>‘ರೈತ ದೇಶದ ಬೆನ್ನೆಲುಬು ಎಂದು ವೇದಿಕೆಗಳಲ್ಲಿ ಭಾಷಣ ಮಾಡುವ ರಾಜಕೀಯ ನೇತಾರರು, ಈ ರೀತಿ ಕೃಷಿ ಚಟುವಟಿಕೆಗೆ ನಿರ್ಬಂಧ ಹೇರುತ್ತಿರುವುದು ಎಷ್ಟು ಸರಿ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಕೇಂದ್ರ ಸರ್ಕಾರದ ಕ್ರಮದಿಂದಾಗಿ ಭವಿಷ್ಯದಲ್ಲಿ ಆಹಾರದ ಕೊರತೆ ಉಂಟಾಗಿ ವಿದೇಶಗಳಿಂದ ಆಹಾರ ಬೆಳೆ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಕಳೆದ ವರ್ಷ ತಾಲ್ಲೂಕಿನಲ್ಲಿ 72,000 ಚೀಲ ಯೂರಿಯಾ ಗೊಬ್ಬರದ ಸಂಗ್ರಹವಿತ್ತು. ಈ ವರ್ಷ 10,880 ಮೂಟೆ ಮಾತ್ರ ದಾಸ್ತಾನು ಇದೆ. ಇಷ್ಟು ಪ್ರಮಾಣದಲ್ಲಿ ಗೊಬ್ಬರದ ಕೊರತೆಯಾದರೆ ಈ ಭಾಗದ ಭತ್ತ, ಮೆಕ್ಕೆಜೋಳ ಬೆಳೆಯುವ ರೈತರಿಗೆ ತೀವ್ರ ತೊಂದರೆಯಾಗಲಿದೆ’ ಎಂದರು.</p>.<p>‘ದಪ್ಪ ಅಭಿಲಾಷ ತಳಿಯ ಭತ್ತದ ಬಿತ್ತನೆ ಬೀಜವನ್ನು ಈ ವರ್ಷ ಕೃಷಿ ಇಲಾಖೆಯಿಂದ ಪೂರೈಸಲಾಗುತ್ತಿಲ್ಲ. ಈ ಸಂಬಂಧ ಇಲಾಖೆ ರೈತರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಈ ತಳಿಯ ಬಿತ್ತನೆ ಬೀಜ ಸಿಗುತ್ತದೆ ಎಂಬ ನಿರೀಕ್ಷೆಯಿಂದ ಭೂಮಿ ಹದ ಮಾಡಿದ ರೈತರಿಗೆ ಕಡೆ ಗಳಿಗೆಯಲ್ಲಿ ವಿಷಯ ತಿಳಿದು ಅನನುಕೂಲವಾಗುತ್ತದೆ. ರೈತರಿಗೆ ಈ ಸಂಬಂಧ ಸಕಾಲದಲ್ಲಿ ಮಾಹಿತಿ ತಲುಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಳೆದ ವರ್ಷ ತಾಲ್ಲೂಕಿನ ಮಳೆಮಾಪನ ಕೇಂದ್ರಗಳಲ್ಲಿನ ದೋಷಗಳಿಂದ ಮಳೆಯ ಪ್ರಮಾಣ ಸರಿಯಾಗಿ ದಾಖಲಾಗದೆ ಅನೇಕ ರೈತರಿಗೆ ಬೆಳೆ ವಿಮೆ ಸೌಲಭ್ಯದ ಪ್ರಯೋಜನ ದೊರಕಿಲ್ಲ. ಈ ವರ್ಷ ಮಳೆಗಾಲಕ್ಕೆ ಮುನ್ನ ಮಳೆಮಾಪನ ಕೇಂದ್ರಗಳನ್ನು ದುರಸ್ತಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಮುಖಂಡ ಜಿನೇಶ್, ಪ್ರಮುಖರಾದ ಹೊಯ್ಸಳ ಗಣಪತಿಯಪ್ಪ, ರಾಮಪ್ಪ ಶಿರವಾಳ, ಜಯಲಕ್ಷ್ಮಿ, ಭದ್ರೇಶ್ ಬಾಳಗೋಡು, ದೇವು ಆಲಳ್ಳಿ, ಸುಂದರ್ ಸಿಂಗ್, ರಮೇಶ್ ಐಗಿನಬೈಲು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-42-1332086313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>