<p><strong>ಸಾಗರ:</strong> ಇಲ್ಲಿನ ವಿಜಯನಗರ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ಒತ್ತಾಯಿಸಿ ಬಡಾವಣೆ ನಿವಾಸಿಗಳು ಬುಧವಾರ ನಗರಸಭೆ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ನಮ್ಮ ಬಡಾವಣೆಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಸಕಾಲದಲ್ಲಿ ಆಗುತ್ತಿಲ್ಲ. ನಿಯಮಿತವಾಗಿ ಚರಂಡಿ, ಸುತ್ತಮುತ್ತಲು ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸದ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ’ ಎಂದು ನಗರಸಭೆ ಮಾಜಿ ಸದಸ್ಯ ರವಿ ಲಿಂಗನಮಕ್ಕಿ ದೂರಿದರು.</p>.<p>‘ಈ ಹಿಂದೆ ಕಸ ಸಂಗ್ರಹ ಮಾಡುವ ವಾಹನ ಎರಡು ದಿನಕ್ಕೊಮ್ಮೆ ಬರುತ್ತಿತ್ತು. ಈಗ ಎಂಟು ಅಥವಾ ಹತ್ತು ದಿನಗಳಿಗೊಮ್ಮೆ ಬರುತ್ತಿದೆ. ಈ ಕಾರಣ ಸ್ಥಳೀಯ ನಿವಾಸಿಗಳಿಗೆ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p>‘ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಅನೇಕ ಬಾರಿ ನಗರಸಭೆ ಕಚೇರಿಗೆ ಮನವಿ ಮಾಡಿದ್ದರೂ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಾರಣ ಸ್ಪಂದನೆ ದೊರಕುತ್ತಿಲ್ಲ. ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ನಗರಸಭೆ ಕಚೇರಿ ಎದುರು ನಿರಂತರವಾಗಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಪ್ರಮುಖರಾದ ತೀ.ನ. ಶ್ರೀನಿವಾಸ್, ವೈ. ಮೋಹನ್, ಕಿರಣ್, ಪ್ರಸನ್ನ, ಪದ್ಮರಾಜ್, ಹುಚ್ಚಪ್ಪ, ಚಂದ್ರು ಗೌಡ, ಸತ್ಯನಾರಾಯಣ, ನಾಗರಾಜ್, ಲಕ್ಷ್ಮಿ ಹತ್ವಾರ್, ಸಂಗಪ್ಪ, ಚಂದ್ರಣ್ಣ, ತಮ್ಮಣ್ಣಪ್ಪ, ಅಕ್ಷರಾ, ನವೀನ್, ರಾಘವೇಂದ್ರ, ಅವಧಾನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-1954338872</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಇಲ್ಲಿನ ವಿಜಯನಗರ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ಒತ್ತಾಯಿಸಿ ಬಡಾವಣೆ ನಿವಾಸಿಗಳು ಬುಧವಾರ ನಗರಸಭೆ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ನಮ್ಮ ಬಡಾವಣೆಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಸಕಾಲದಲ್ಲಿ ಆಗುತ್ತಿಲ್ಲ. ನಿಯಮಿತವಾಗಿ ಚರಂಡಿ, ಸುತ್ತಮುತ್ತಲು ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸದ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ’ ಎಂದು ನಗರಸಭೆ ಮಾಜಿ ಸದಸ್ಯ ರವಿ ಲಿಂಗನಮಕ್ಕಿ ದೂರಿದರು.</p>.<p>‘ಈ ಹಿಂದೆ ಕಸ ಸಂಗ್ರಹ ಮಾಡುವ ವಾಹನ ಎರಡು ದಿನಕ್ಕೊಮ್ಮೆ ಬರುತ್ತಿತ್ತು. ಈಗ ಎಂಟು ಅಥವಾ ಹತ್ತು ದಿನಗಳಿಗೊಮ್ಮೆ ಬರುತ್ತಿದೆ. ಈ ಕಾರಣ ಸ್ಥಳೀಯ ನಿವಾಸಿಗಳಿಗೆ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p>‘ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಅನೇಕ ಬಾರಿ ನಗರಸಭೆ ಕಚೇರಿಗೆ ಮನವಿ ಮಾಡಿದ್ದರೂ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಾರಣ ಸ್ಪಂದನೆ ದೊರಕುತ್ತಿಲ್ಲ. ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ನಗರಸಭೆ ಕಚೇರಿ ಎದುರು ನಿರಂತರವಾಗಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಪ್ರಮುಖರಾದ ತೀ.ನ. ಶ್ರೀನಿವಾಸ್, ವೈ. ಮೋಹನ್, ಕಿರಣ್, ಪ್ರಸನ್ನ, ಪದ್ಮರಾಜ್, ಹುಚ್ಚಪ್ಪ, ಚಂದ್ರು ಗೌಡ, ಸತ್ಯನಾರಾಯಣ, ನಾಗರಾಜ್, ಲಕ್ಷ್ಮಿ ಹತ್ವಾರ್, ಸಂಗಪ್ಪ, ಚಂದ್ರಣ್ಣ, ತಮ್ಮಣ್ಣಪ್ಪ, ಅಕ್ಷರಾ, ನವೀನ್, ರಾಘವೇಂದ್ರ, ಅವಧಾನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-1954338872</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>