<p><strong>ಸಾಗರ:</strong> ಪ್ರತಿ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಕೇಂದ್ರಗಳಿಗೆ ಶಾಸಕರ ನಿಧಿಯಿಂದ ಅನುದಾನ ದೊರಕುವಂತಾಗಬೇಕು ಎಂದು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ವಿದ್ವಾನ್ ದತ್ತಮೂರ್ತಿ ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಶಿವಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರ ಈಚೆಗೆ ಏರ್ಪಡಿಸಿದ್ದ ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಭಾಗದಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳು ಶಾಸಕರ ಅನುದಾನದ ನೆರವಿನಿಂದ ನಡೆಯುತ್ತಿವೆ. ಮಲೆನಾಡು ಭಾಗದಲ್ಲೂ ಈ ನೆರವು ಸಿಗುವಂತಾಗಬೇಕು ಎಂದರು.</p>.<p>ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಯಕ್ಷಗಾನ ಕಲಿಕೆಯಲ್ಲಿ ತೊಡಗಿಕೊಂಡರೆ ಪುರಾಣ ಪ್ರಸಂಗಗಳ ಪರಿಚಯವಾಗುವ ಜೊತೆಗೆ ಭಾಷಾ ಶುದ್ಧತೆ ಅವರಲ್ಲಿ ಮೂಡುತ್ತದೆ. ಈ ಮೂಲಕ ಉತ್ತಮ ಅಭಿರುಚಿ ಬೆಳೆದು ಅವರಲ್ಲೇ ಕೆಲವರು ದೊಡ್ಡ ಕಲಾವಿದರಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.</p>.<p>ಹೊಸ ತಲೆಮಾರಿನವರು ಯಕ್ಷಗಾನ ಕಲೆಯಲ್ಲಿ ಭಾಗಿಯಾಗುವುದು ಕಡಿಮೆಯಾಗುತ್ತಿದೆ. ಹಿಂದಿನ ದಶಕಗಳಲ್ಲಿ ಇದ್ದ ಪ್ರೇಕ್ಷಕರ ಸಂಖ್ಯೆ ಯಕ್ಷಗಾನಕ್ಕೆ ಇಲ್ಲವಾಗಿದೆ. ಯಕ್ಷಗಾನದ ಗತ ವೈಭವ ಮರುಕಳಿಸಬೇಕಾದರೆ ಮಕ್ಕಳಲ್ಲಿ ಈ ಕಲೆಯ ಕುರಿತು ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದು ಆಪ್ಸ್ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಹೇಳಿದರು.</p>.<p>ಹಿರಿಯ ವಕೀಲ ಟಿ.ಬಿ.ಮಂಜುನಾಥ ಶೆಟ್ಟಿ, ಪ್ರಮುಖರಾದ ಡಿ.ಗಣಪತಪ್ಪ, ಮಂಜಪ್ಪ, ಗುರು, ಶಿವು ಶಿರಳಗಿ, ಎಸ್.ಸಿ.ಸೈದೂರು ಇದ್ದರು. ಪ್ರತಿಭಾ ಪ್ರಸಾದ್ ಪ್ರಾರ್ಥಿಸಿದರು. ಪೂರ್ಣಿಮಾ ಸೈದೂರು ಸ್ವಾಗತಿಸಿದರು. ನಂದಿನಿ ದೇವರಾಜ್ ವಂದಿಸಿದರು. ರಾಜು ಭಾಗವತ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಪ್ರತಿ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಕೇಂದ್ರಗಳಿಗೆ ಶಾಸಕರ ನಿಧಿಯಿಂದ ಅನುದಾನ ದೊರಕುವಂತಾಗಬೇಕು ಎಂದು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ವಿದ್ವಾನ್ ದತ್ತಮೂರ್ತಿ ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಶಿವಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರ ಈಚೆಗೆ ಏರ್ಪಡಿಸಿದ್ದ ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಭಾಗದಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳು ಶಾಸಕರ ಅನುದಾನದ ನೆರವಿನಿಂದ ನಡೆಯುತ್ತಿವೆ. ಮಲೆನಾಡು ಭಾಗದಲ್ಲೂ ಈ ನೆರವು ಸಿಗುವಂತಾಗಬೇಕು ಎಂದರು.</p>.<p>ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಯಕ್ಷಗಾನ ಕಲಿಕೆಯಲ್ಲಿ ತೊಡಗಿಕೊಂಡರೆ ಪುರಾಣ ಪ್ರಸಂಗಗಳ ಪರಿಚಯವಾಗುವ ಜೊತೆಗೆ ಭಾಷಾ ಶುದ್ಧತೆ ಅವರಲ್ಲಿ ಮೂಡುತ್ತದೆ. ಈ ಮೂಲಕ ಉತ್ತಮ ಅಭಿರುಚಿ ಬೆಳೆದು ಅವರಲ್ಲೇ ಕೆಲವರು ದೊಡ್ಡ ಕಲಾವಿದರಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.</p>.<p>ಹೊಸ ತಲೆಮಾರಿನವರು ಯಕ್ಷಗಾನ ಕಲೆಯಲ್ಲಿ ಭಾಗಿಯಾಗುವುದು ಕಡಿಮೆಯಾಗುತ್ತಿದೆ. ಹಿಂದಿನ ದಶಕಗಳಲ್ಲಿ ಇದ್ದ ಪ್ರೇಕ್ಷಕರ ಸಂಖ್ಯೆ ಯಕ್ಷಗಾನಕ್ಕೆ ಇಲ್ಲವಾಗಿದೆ. ಯಕ್ಷಗಾನದ ಗತ ವೈಭವ ಮರುಕಳಿಸಬೇಕಾದರೆ ಮಕ್ಕಳಲ್ಲಿ ಈ ಕಲೆಯ ಕುರಿತು ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದು ಆಪ್ಸ್ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಹೇಳಿದರು.</p>.<p>ಹಿರಿಯ ವಕೀಲ ಟಿ.ಬಿ.ಮಂಜುನಾಥ ಶೆಟ್ಟಿ, ಪ್ರಮುಖರಾದ ಡಿ.ಗಣಪತಪ್ಪ, ಮಂಜಪ್ಪ, ಗುರು, ಶಿವು ಶಿರಳಗಿ, ಎಸ್.ಸಿ.ಸೈದೂರು ಇದ್ದರು. ಪ್ರತಿಭಾ ಪ್ರಸಾದ್ ಪ್ರಾರ್ಥಿಸಿದರು. ಪೂರ್ಣಿಮಾ ಸೈದೂರು ಸ್ವಾಗತಿಸಿದರು. ನಂದಿನಿ ದೇವರಾಜ್ ವಂದಿಸಿದರು. ರಾಜು ಭಾಗವತ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>