<p><strong>ಭದ್ರಾವತಿ</strong>: ‘ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ 2006 ರಿಂದ 14ರ ವರೆಗೆ ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಾಟ ಮಾಡಲಾಗಿದೆ’ ಎಂದು ಸಂಘದ ಅಧ್ಯಕ್ಷ ಸಿ.ಜಿ. ಬಸವರಾಜಯ್ಯ ಆರೋಪಿಸಿದರು. </p>.<p>‘ಈ ಸಂಬಂಧ ವಿಚಾರಣೆ ನಡೆದು 74 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 16 ರಿಂದ 19ರ ವರೆಗೆ 4 ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಎಂಪಿಎಂ ಬಡಾವಣೆಯಲ್ಲಿ ಒಟ್ಟು 416 ನಿವೇಶನಗಳನ್ನು ಸಿದ್ಧಗೊಳಿಸಲಾಗಿತ್ತು. ಈ ಪೈಕಿ 342 ನಿವೇಶನಗಳು ಸದಸ್ಯರಿಗೆ ಹಂಚಿಕೆಯಾಗಿವೆ. 74 ನಿವೇಶನಗಳನ್ನು ಅಂದಿನ ಸಂಘದ ಪದಾಧಿಕಾರಿಗಳು ಸದಸ್ಯರಲ್ಲದವರಿಗೆ ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಿವೇಶನ ಮಾರಿದ ಹಣವನ್ನು ಕೂಡ ಸಂಘಕ್ಕೆ ಜಮಾ ಮಾಡಿರಲಿಲ್ಲ. ಈ ಬಗ್ಗೆ ಸಹಾಯಕ ನಿಬಂಧಕರಿಗೆ 2018ರಲ್ಲಿ ದೂರು ನೀಡಲಾಗಿತ್ತು. ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಅಲ್ಲದೆ ಸಂಘದ ಹೆಸರಿನಲ್ಲಿ ಇನ್ನೊಂದು ಬಡಾವಣೆ ಮಾಡುವುದಾಗಿ ಕೆಲವರ ಬಳಿ ಹಣ ಪಡೆದು ಸಂಘದ ಲೆಟರ್ ಹೆಡ್, ರಸೀದಿಗಳನ್ನು ದುರುಪಯೋಗ ಪಡಿಸಿಕೊಂಡಿರುವುದು ಗೊತ್ತಾಗಿದೆ’ ಎಂದರು.</p>.<p>ಆರೋಪಿಗಳಾದ ಶ್ರೀನಿವಾಸ್ ಮತ್ತು ಮಂಜುನಾಥ್ ಹಾಗೂ ಮಾಸಿಲಾಮಣಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಉಪಾಧ್ಯಕ್ಷ ವಿ.ಗೋವಿಂದಪ್ಪ, ಕಾರ್ಯದರ್ಶಿ ಎಚ್.ವೀರಭದ್ರಪ್ಪ, ಎಸ್.ಆರ್. ಸೋಮಶೇಖರ್ ಪರಮಶಿವ, ಎಚ್.ಆನಂದಮೂರ್ತಿ, ಅಭಯಕುಮಾರ್, ಸಾರಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ‘ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ 2006 ರಿಂದ 14ರ ವರೆಗೆ ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಾಟ ಮಾಡಲಾಗಿದೆ’ ಎಂದು ಸಂಘದ ಅಧ್ಯಕ್ಷ ಸಿ.ಜಿ. ಬಸವರಾಜಯ್ಯ ಆರೋಪಿಸಿದರು. </p>.<p>‘ಈ ಸಂಬಂಧ ವಿಚಾರಣೆ ನಡೆದು 74 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 16 ರಿಂದ 19ರ ವರೆಗೆ 4 ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಎಂಪಿಎಂ ಬಡಾವಣೆಯಲ್ಲಿ ಒಟ್ಟು 416 ನಿವೇಶನಗಳನ್ನು ಸಿದ್ಧಗೊಳಿಸಲಾಗಿತ್ತು. ಈ ಪೈಕಿ 342 ನಿವೇಶನಗಳು ಸದಸ್ಯರಿಗೆ ಹಂಚಿಕೆಯಾಗಿವೆ. 74 ನಿವೇಶನಗಳನ್ನು ಅಂದಿನ ಸಂಘದ ಪದಾಧಿಕಾರಿಗಳು ಸದಸ್ಯರಲ್ಲದವರಿಗೆ ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಿವೇಶನ ಮಾರಿದ ಹಣವನ್ನು ಕೂಡ ಸಂಘಕ್ಕೆ ಜಮಾ ಮಾಡಿರಲಿಲ್ಲ. ಈ ಬಗ್ಗೆ ಸಹಾಯಕ ನಿಬಂಧಕರಿಗೆ 2018ರಲ್ಲಿ ದೂರು ನೀಡಲಾಗಿತ್ತು. ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಅಲ್ಲದೆ ಸಂಘದ ಹೆಸರಿನಲ್ಲಿ ಇನ್ನೊಂದು ಬಡಾವಣೆ ಮಾಡುವುದಾಗಿ ಕೆಲವರ ಬಳಿ ಹಣ ಪಡೆದು ಸಂಘದ ಲೆಟರ್ ಹೆಡ್, ರಸೀದಿಗಳನ್ನು ದುರುಪಯೋಗ ಪಡಿಸಿಕೊಂಡಿರುವುದು ಗೊತ್ತಾಗಿದೆ’ ಎಂದರು.</p>.<p>ಆರೋಪಿಗಳಾದ ಶ್ರೀನಿವಾಸ್ ಮತ್ತು ಮಂಜುನಾಥ್ ಹಾಗೂ ಮಾಸಿಲಾಮಣಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಉಪಾಧ್ಯಕ್ಷ ವಿ.ಗೋವಿಂದಪ್ಪ, ಕಾರ್ಯದರ್ಶಿ ಎಚ್.ವೀರಭದ್ರಪ್ಪ, ಎಸ್.ಆರ್. ಸೋಮಶೇಖರ್ ಪರಮಶಿವ, ಎಚ್.ಆನಂದಮೂರ್ತಿ, ಅಭಯಕುಮಾರ್, ಸಾರಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>