ಆರೋಪಿಗಳಿಂದ ಕಡವೆಯ ಕಾಲು, ಚರ್ಮ, ಮಾಂಸ ಮತ್ತು ಪಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ವಿಶೇಷ ಪಡೆ ರಚಿಸಲಾಗಿದೆ ಎಂದು ವಲಯಾರಣ್ಯಾಧಿಕಾರಿ ಪ್ರೀತಿ ರಾಮದಾಸ ನಾಯ್ಕ ತಿಳಿಸಿದರು.
ದಾಳಿಯಲ್ಲಿ ಉಪ ಅರಣ್ಯಸಂರಕ್ಷಣಾಧಿಕಾರಿ ಐ.ಎಂ. ನಾಗರಾಜ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಭಾಗವಹಿಸಿದ್ದರು.