‘ತಾಲ್ಲೂಕಿನಲ್ಲಿ ಶರಾವತಿ ನದಿ ದಂಡೆ ಮತ್ತು ಹಳ್ಳಕೊಳ್ಳಗಳಲ್ಲಿ ಮರಳು ಸಾಗಣೆ ನಡೆಯುತ್ತಿದೆ. ಲಾರಿ ಮಾಲೀಕರು ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಸೇರಿ ಮರಳು ಸಾಗಣೆ ವಹಿವಾಟು ನಡೆಸುತ್ತಿದ್ದಾರೆ. ಇದರಲ್ಲಿ ಶಾಸಕ ಹಾಲಪ್ಪ ಅವರ ಪಾತ್ರವೇನೂ ಇಲ್ಲ. ಮರಳು ಸಾಗಣೆಗೆ ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಒತ್ತಡ ತಂದಿದ್ದಾರೆ ಅಷ್ಟೆ. ಆದರೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮರಳು ಗಣಿಗಾರಿಕೆಯಲ್ಲಿ ಶಾಸಕ ಹಾಲಪ್ಪ ಅವರ ಪಾತ್ರವಿದೆ. ಅವರು ಮರಳು ಸಾಗಾಣಿಕೆದಾರರಿಂದ ಹಫ್ತಾ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದಲ್ಲಿ ಹುರುಳಿಲ್ಲ. ಶಾಸಕರು ಮರಳು ಸಾಗಣೆದಾರರಿಂದ ಒಂದು ಪೈಸೆಯನ್ನೂ ಮುಟ್ಟಿಲ್ಲ. ನಾವೂಕೊಟ್ಟಿಲ್ಲ. ಬೇಕಿದ್ದರೆ ಸಿಗಂದೂರು ದೇವಸ್ಥಾನಕ್ಕೆ ಬರಲಿ. ಅಲ್ಲಿ ಶಾಸಕರಪರವಾಗಿ ನಾವು ಆಣೆ ಪ್ರಮಾಣ ಮಾಡುತ್ತೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.