<p><strong>ಶಿಕಾರಿಪುರ:</strong> ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಕನಕಗುರುಪೀಠದ ನೇತೃತ್ವದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಎಚ್ಚರಿಸಿದರು.</p>.<p>ಪಟ್ಟಣದ ಕಡೆಕೇರಿಯ ತುದಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಆ.15ರಂದು ಸಮುದಾಯದ ಬಂಧುಗಳು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣೆಕ್ಕೆ ಮುಂದಾಗಿದ್ದರು. ಸಮುದಾಯ ತಪ್ಪು ಮಾಡಿದ್ದರೆ ತಿಳಿಸಿ ಹೇಳಬೇಕಿತ್ತು. ಆದರೆ, ತಾಲ್ಲೂಕು ಆಡಳಿತ ಪ್ರತಿಮೆ ತೆರವು ಮಾಡಿರುವುದು ಖಂಡನೀಯ. ಈ ದೇಶದಲ್ಲಿ ಅಪರಾಧ ಮಾಡಿ ಮರಣದಂಡನೆಗೊಳಗಾದ ಕೈದಿಗಳಿಗೂ ಕೊನೆ ಆಸೆ ಕೇಳುವ ಪದ್ದತಿ ,ಪರಂಪರೆ ಹಾಗೂ ಸಂಸ್ಕೃತಿ ಇದೆ. ಮಾಡಿರುವ ಲೋಪ ದೋಷಗಳನ್ನು ಸರಪಡಿಸಲು ಅವಕಾಶ ಕೊಡದೆ ಕ್ರಾಂತಿವೀರನ ಪ್ರತಿಮೆಗೆ ಅಪಮಾನ ಮಾಡಲಾಗಿದೆ ಎಂದು ಖಂಡಿಸಿದರು.</p>.<p>ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಕ್ಷೇತ್ರದ ಸಂಸದರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಮೆ ಪ್ರತಿಷ್ಠಾಪನೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಕನಕಗುರುಪೀಠದ ನೇತೃತ್ವದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಎಚ್ಚರಿಸಿದರು.</p>.<p>ಪಟ್ಟಣದ ಕಡೆಕೇರಿಯ ತುದಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಆ.15ರಂದು ಸಮುದಾಯದ ಬಂಧುಗಳು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣೆಕ್ಕೆ ಮುಂದಾಗಿದ್ದರು. ಸಮುದಾಯ ತಪ್ಪು ಮಾಡಿದ್ದರೆ ತಿಳಿಸಿ ಹೇಳಬೇಕಿತ್ತು. ಆದರೆ, ತಾಲ್ಲೂಕು ಆಡಳಿತ ಪ್ರತಿಮೆ ತೆರವು ಮಾಡಿರುವುದು ಖಂಡನೀಯ. ಈ ದೇಶದಲ್ಲಿ ಅಪರಾಧ ಮಾಡಿ ಮರಣದಂಡನೆಗೊಳಗಾದ ಕೈದಿಗಳಿಗೂ ಕೊನೆ ಆಸೆ ಕೇಳುವ ಪದ್ದತಿ ,ಪರಂಪರೆ ಹಾಗೂ ಸಂಸ್ಕೃತಿ ಇದೆ. ಮಾಡಿರುವ ಲೋಪ ದೋಷಗಳನ್ನು ಸರಪಡಿಸಲು ಅವಕಾಶ ಕೊಡದೆ ಕ್ರಾಂತಿವೀರನ ಪ್ರತಿಮೆಗೆ ಅಪಮಾನ ಮಾಡಲಾಗಿದೆ ಎಂದು ಖಂಡಿಸಿದರು.</p>.<p>ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಕ್ಷೇತ್ರದ ಸಂಸದರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಮೆ ಪ್ರತಿಷ್ಠಾಪನೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>