ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಎಚ್.ನಾಗರಾಜ್ ಮಾತನಾಡಿ, ‘ಎಳ್ಳು, ಬೆಲ್ಲ ತಿಂದು ಒಳ್ಳೆಯ ಮಾತನಾಡಿ ಎಂಬ ನಂಬಿಕೆಯುಳ್ಳ ಈ ಹಬ್ಬದ ಸಾರ್ಥಕತೆಯನ್ನು ಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ. ಸೂರ್ಯ ಮಕರ ರಾಶಿಗೆ ಪ್ರವೇಶ ಪಡೆಯುತ್ತಾನೆ. ಆತ ಜಗತ್ತಿನ ಶಕ್ತಿ. ಮಕ್ಕಳು ಕೂಡ ಅಂತಹ ಶಕ್ತಿ ಬೆಳೆಸಿಕೊಳ್ಳಲಿ’ ಎಂದು ಸಲಹೆ ನೀಡಿದರು.