ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೆಕಡೂರು: ಪಂಚಾಯಿತಿ ಆವರಣದಲ್ಲಿ ಶವಸಂಸ್ಕಾರಕ್ಕೆ ಯತ್ನ

Last Updated 12 ಆಗಸ್ಟ್ 2022, 5:40 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನ ಸಂತೆ ಕಡೂರಿನಲ್ಲಿ ಸ್ಮಶಾನ ಇಲ್ಲದ ಕಾರಣ ಗ್ರಾಮ ಪಂಚಾಯಿತಿ ಆವರಣದಲ್ಲೇ ಶವ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ಮಾಡಿಕೊಂಡಿದ್ದರು. ವಿಷಯ ತಿಳಿದ ಗ್ರಾಮದ ಹಿರಿಯರು ಮುಂದಾಗಿ ಸಮಸ್ಯೆ ಪರಿಹರಿಸಿದರು.

ಸಂತೆಕಡೂರಿನ ಎ.ಕೆ.ಕಾಲೊನಿಯ ವೃದ್ಧೆ ರಂಗಮ್ಮ ಗುರುವಾರ ಮೃತಪಟ್ಟಿದ್ದರು. ಅವರ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶವವನ್ನು ಊರಿನವರು ಗ್ರಾಮ ಪಂಚಾಯ್ತಿ ಆವರಣಕ್ಕೆ ತಂದಿದ್ದರು. ಅಂಗಳದಲ್ಲಿಯೇ ಗುಂಡಿ ತೆಗೆದು ಅಂತ್ಯಕ್ರಿಯೆ ನೆರವೇರಿಸಲು ಮುಂದಾಗಿದ್ದರು.

ಸಂತೆ ಕಡೂರು ಗ್ರಾಮದಲ್ಲಿ ಸ್ಮಶಾನಕ್ಕೆಂದು ಮೂರು ಎಕರೆ ಜಾಗ ಮಂಜೂರಾಗಿತ್ತು. ಆದರೆ ಆ ಜಾಗದಲ್ಲಿ ಕೆಲವರು ಮನೆ ಕಟ್ಟಿಕೊಂಡಿದ್ದಾರೆ. ಉಳಿದ ಜಾಗವನ್ನು ಕಳೆದ ವಾರ ಸಮೀಕ್ಷೆ ಮಾಡಲು ಹೋದ ಸರ್ವೆ ಅಧಿಕಾರಿಗಳನ್ನು ಅಲ್ಲಿನ ಮನೆಯವರು ಪ್ರತಿಭಟನೆ ಮಾಡಿ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ಆ ಜಾಗ ವಿವಾದಾತ್ಮಕವಾಗಿ ಉಳಿದಿದೆ ಎಂದು ತಿಳಿದುಬಂದಿದೆ.

ಅದೇ ಜಾಗದಲ್ಲಿ ವೃದ್ಧೆ ರಂಗಮ್ಮನ ಶವ ಸಂಸ್ಕಾರ ನಡೆಸಲು ಕುಟುಂಬದವರು ಕೊಂಡೊಯ್ದಿದ್ದರು. ಆದರೆ ಆ ಜಾಗದಲ್ಲಿ ಶವಸಂಸ್ಕಾರಕ್ಕೆ ಅಲ್ಲಿನ ಕೆಲವರು ಅವಕಾಶ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗ್ರಾಮ ಪಂಚಾಯಿತಿ ಆವರಣದ ಒಳಗೆ ಗುಂಡಿ ತೆಗೆದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಆಗ ಗ್ರಾಮದ ಹಿರಿಯರು ಮಧ್ಯಪ್ರವೇಶಿಸಿ ವಿವಾದ ತಿಳಿಗೊಳಿಸಿದರು. ಅದೇ ಜಾಗದಲ್ಲಿ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟು ತಾತ್ಕಾಲಿಕವಾಗಿ ಸಮಸ್ಯೆ ಪರಿಹರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT