ಅದೇ ಜಾಗದಲ್ಲಿ ವೃದ್ಧೆ ರಂಗಮ್ಮನ ಶವ ಸಂಸ್ಕಾರ ನಡೆಸಲು ಕುಟುಂಬದವರು ಕೊಂಡೊಯ್ದಿದ್ದರು. ಆದರೆ ಆ ಜಾಗದಲ್ಲಿ ಶವಸಂಸ್ಕಾರಕ್ಕೆ ಅಲ್ಲಿನ ಕೆಲವರು ಅವಕಾಶ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗ್ರಾಮ ಪಂಚಾಯಿತಿ ಆವರಣದ ಒಳಗೆ ಗುಂಡಿ ತೆಗೆದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಆಗ ಗ್ರಾಮದ ಹಿರಿಯರು ಮಧ್ಯಪ್ರವೇಶಿಸಿ ವಿವಾದ ತಿಳಿಗೊಳಿಸಿದರು. ಅದೇ ಜಾಗದಲ್ಲಿ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟು ತಾತ್ಕಾಲಿಕವಾಗಿ ಸಮಸ್ಯೆ ಪರಿಹರಿಸಿದರು.