<p><strong>ಶಿವಮೊಗ್ಗ:</strong> ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಾಗರ ಪಟ್ಟಣಕ್ಕೆ ಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ವಾಪಸ್ ಮರಳಿದರು.</p>.<p>ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ನೂತನ ಸೇತುವೆ ಲೋಕಾರ್ಪಣೆಗೆ ತಮ್ಮನ್ನು ಆಹ್ವಾನಿಸುವಲ್ಲಿ ಶಿಷ್ಟಾಚಾರ ಪಾಲನೆ ಆಗಿಲ್ಲ ಎಂದು ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಪಕ್ಷದ ಸಚಿವರು, ಶಾಸಕರಿಗೆ ಸೂಚನೆ ನೀಡಿದ್ದರು. </p>.ಸಿಗಂದೂರು ಸೇತುವೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ನಿತಿನ್ ಗಡ್ಕರಿ ಪ್ರತಿಕ್ರಿಯೆ.<p>ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಳಗಾವಿಯಿಂದ ಶಿವಮೊಗ್ಗ ಮೂಲಕ ಸಾಗರಕ್ಕೆ ಬಂದ ಸಚಿವ ಸತೀಶ ಜಾರಕಿಹೊಳಿ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಲಹೊತ್ತು ತಂಗಿ ವಾಪಸ್ ಮರಳಿದರು. ಅದಕ್ಕೂ ಮುನ್ನ ಸಾಗರದ ಕಾಂಗ್ರೆಸ್ ಮುಖಂಡರೊಂದಿಗೆ ಅಲ್ಲಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ವಿಚಾರದಲ್ಲಿ ಕೆಲವರಿಂದ ತಪ್ಪುಗಳು ಆಗಿವೆ. ಯೋಜನೆ ಅವರದ್ದೇ (ಕೇಂದ್ರ) ಆದರೂ ಭೂಮಿ ನಮ್ಮದು. ಹೀಗಾಗಿ ಪರಸ್ಪರ ಸಮನ್ವಯ ಅಗತ್ಯ.ಮುಂದೆ ಇಂತಹ ಸಂಗತಿಗಳು ಮರುಕಳಿಸಬಾರದು' ಎಂದು ಹೇಳಿದರು.</p>.<p>ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮದಿಂದ ದೂರ ಉಳಿದರು.</p>.<p>ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.ಅಂಬಾರಗೋಡ್ಲು-ಕಳಸವಳ್ಳಿ ನೂತನ ತೂಗುಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ನಾಮಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಾಗರ ಪಟ್ಟಣಕ್ಕೆ ಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ವಾಪಸ್ ಮರಳಿದರು.</p>.<p>ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ನೂತನ ಸೇತುವೆ ಲೋಕಾರ್ಪಣೆಗೆ ತಮ್ಮನ್ನು ಆಹ್ವಾನಿಸುವಲ್ಲಿ ಶಿಷ್ಟಾಚಾರ ಪಾಲನೆ ಆಗಿಲ್ಲ ಎಂದು ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಪಕ್ಷದ ಸಚಿವರು, ಶಾಸಕರಿಗೆ ಸೂಚನೆ ನೀಡಿದ್ದರು. </p>.ಸಿಗಂದೂರು ಸೇತುವೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ನಿತಿನ್ ಗಡ್ಕರಿ ಪ್ರತಿಕ್ರಿಯೆ.<p>ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಳಗಾವಿಯಿಂದ ಶಿವಮೊಗ್ಗ ಮೂಲಕ ಸಾಗರಕ್ಕೆ ಬಂದ ಸಚಿವ ಸತೀಶ ಜಾರಕಿಹೊಳಿ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಲಹೊತ್ತು ತಂಗಿ ವಾಪಸ್ ಮರಳಿದರು. ಅದಕ್ಕೂ ಮುನ್ನ ಸಾಗರದ ಕಾಂಗ್ರೆಸ್ ಮುಖಂಡರೊಂದಿಗೆ ಅಲ್ಲಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ವಿಚಾರದಲ್ಲಿ ಕೆಲವರಿಂದ ತಪ್ಪುಗಳು ಆಗಿವೆ. ಯೋಜನೆ ಅವರದ್ದೇ (ಕೇಂದ್ರ) ಆದರೂ ಭೂಮಿ ನಮ್ಮದು. ಹೀಗಾಗಿ ಪರಸ್ಪರ ಸಮನ್ವಯ ಅಗತ್ಯ.ಮುಂದೆ ಇಂತಹ ಸಂಗತಿಗಳು ಮರುಕಳಿಸಬಾರದು' ಎಂದು ಹೇಳಿದರು.</p>.<p>ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮದಿಂದ ದೂರ ಉಳಿದರು.</p>.<p>ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.ಅಂಬಾರಗೋಡ್ಲು-ಕಳಸವಳ್ಳಿ ನೂತನ ತೂಗುಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ನಾಮಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>