<p><strong>ಸಾಗರ:</strong> ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರುವುದೇ ಕಷ್ಟ ಎನ್ನುವಂತಹ ಸ್ಥಿತಿಯಲ್ಲಿ ಮಹಿಳೆಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಮಹಿಳಾ ಶಿಕ್ಷಣಕ್ಕೆ ಬೆಳವಣಿಗೆಯ ದಿಕ್ಕು ತೋರಿಸಿದ್ದು ಸಾವಿತ್ರಿಬಾಯಿ ಫುಲೆ ದಂಪತಿ ವಿಶೇಷತೆ ಎಂದು ಲೇಖಕ ಜಿ.ಟಿ.ಸತ್ಯನಾರಾಯಣ ಕರೂರು ಹೇಳಿದರು. </p><p>ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗ, ಐಕ್ಯುಎಸಿ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. </p><p>ಜಾತಿಯ ಶ್ರೇಣಿಕೃತ ವ್ಯವಸ್ಥೆಯು ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸುವ ಮೂಲಕ ಯಥಾಸ್ಥಿತಿ ಕಾಯ್ದುಕೊಳ್ಳಲು ಯತ್ನಿಸುತ್ತಿದ್ದ ವೇಳೆಯಲ್ಲಿ ತಮ್ಮದೇ ಆದ ಪ್ರತಿರೋಧ ಶೈಲಿಯಲ್ಲಿ ಮಹಿಳಾ ಶಿಕ್ಷಣಕ್ಕೆ ದಾರಿ ತೋರಿಸಿದ್ದು ಫುಲೆ ದಂಪತಿ ಎಂಬುದನ್ನು ಮರೆಯುವಂತಿಲ್ಲ ಎಂದರು.</p><p>ಧರ್ಮದ ಕಟ್ಟುಪಾಡಿನ ಹೆಸರಿನಲ್ಲಿ ಮಹಿಳೆಯರನ್ನು ಹಲವು ವರ್ಷಗಳಿಂದ ಶಿಕ್ಷಣ ವಂಚಿತರನ್ನಾಗಿ ಮಾಡಲಾಗಿತ್ತು. ಈ ಮೂಲಕ ಭಾರತದ ಜಾತಿ ವ್ಯವಸ್ಥೆಯು ಜ್ಞಾನವನ್ನು ಕೆಲವರಿಗೆ ಮಾತ್ರ ಸೀಮಿತ ಮಾಡಿದ್ದ ಹುನ್ನಾರವನ್ನು ವಿಫಲಗೊಳಿಸಿದ್ದು ಸಾವಿತ್ರಿಬಾಯಿ ಫುಲೆ ಅವರ ವಿಶೇಷತೆ ಎಂದು ಅವರು ವಿವರಿಸಿದರು.</p><p>ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಕುಂಸಿ ಉಮೇಶ್ ಇದ್ದರು. ಎಸ್.ಎಂ.ಗಣಪತಿ ಸ್ವಾಗತಿಸಿದರು. ಸುರೇಶ್ ವಂದಿಸಿದರು. ನಂದಿನಿ, ಚಂದ್ರಕಲಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರುವುದೇ ಕಷ್ಟ ಎನ್ನುವಂತಹ ಸ್ಥಿತಿಯಲ್ಲಿ ಮಹಿಳೆಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಮಹಿಳಾ ಶಿಕ್ಷಣಕ್ಕೆ ಬೆಳವಣಿಗೆಯ ದಿಕ್ಕು ತೋರಿಸಿದ್ದು ಸಾವಿತ್ರಿಬಾಯಿ ಫುಲೆ ದಂಪತಿ ವಿಶೇಷತೆ ಎಂದು ಲೇಖಕ ಜಿ.ಟಿ.ಸತ್ಯನಾರಾಯಣ ಕರೂರು ಹೇಳಿದರು. </p><p>ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗ, ಐಕ್ಯುಎಸಿ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. </p><p>ಜಾತಿಯ ಶ್ರೇಣಿಕೃತ ವ್ಯವಸ್ಥೆಯು ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸುವ ಮೂಲಕ ಯಥಾಸ್ಥಿತಿ ಕಾಯ್ದುಕೊಳ್ಳಲು ಯತ್ನಿಸುತ್ತಿದ್ದ ವೇಳೆಯಲ್ಲಿ ತಮ್ಮದೇ ಆದ ಪ್ರತಿರೋಧ ಶೈಲಿಯಲ್ಲಿ ಮಹಿಳಾ ಶಿಕ್ಷಣಕ್ಕೆ ದಾರಿ ತೋರಿಸಿದ್ದು ಫುಲೆ ದಂಪತಿ ಎಂಬುದನ್ನು ಮರೆಯುವಂತಿಲ್ಲ ಎಂದರು.</p><p>ಧರ್ಮದ ಕಟ್ಟುಪಾಡಿನ ಹೆಸರಿನಲ್ಲಿ ಮಹಿಳೆಯರನ್ನು ಹಲವು ವರ್ಷಗಳಿಂದ ಶಿಕ್ಷಣ ವಂಚಿತರನ್ನಾಗಿ ಮಾಡಲಾಗಿತ್ತು. ಈ ಮೂಲಕ ಭಾರತದ ಜಾತಿ ವ್ಯವಸ್ಥೆಯು ಜ್ಞಾನವನ್ನು ಕೆಲವರಿಗೆ ಮಾತ್ರ ಸೀಮಿತ ಮಾಡಿದ್ದ ಹುನ್ನಾರವನ್ನು ವಿಫಲಗೊಳಿಸಿದ್ದು ಸಾವಿತ್ರಿಬಾಯಿ ಫುಲೆ ಅವರ ವಿಶೇಷತೆ ಎಂದು ಅವರು ವಿವರಿಸಿದರು.</p><p>ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಕುಂಸಿ ಉಮೇಶ್ ಇದ್ದರು. ಎಸ್.ಎಂ.ಗಣಪತಿ ಸ್ವಾಗತಿಸಿದರು. ಸುರೇಶ್ ವಂದಿಸಿದರು. ನಂದಿನಿ, ಚಂದ್ರಕಲಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>