<p><strong>ಸಾಗರ: </strong>ಹಾಲಪ್ಪ ಹರತಾಳು ಅವರು ಸಾಗರ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಕೆಲವು ಹೊಸ ಯೋಜನೆಗಳು ಮಂಜೂರಾಗಿದ್ದವೇ ಹೊರತು ಯಾವ ಯೋಜನೆಗಳಿಗೂ ಹಣ ಬಿಡುಗಡೆ ಮಾಡಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p>.<p>ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುರುವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಪಿಎಂಸಿ ರಸ್ತೆ ಅಭಿವೃದ್ಧಿ, ಉಪ ಕಾರಾಗೃಹ ಕಟ್ಟಡ ಅಭಿವೃದ್ಧಿ, ಮೀನು ಮಾರುಕಟ್ಟೆ, ತಾಯಿ-ಮಗು ಆಸ್ಪತ್ರೆ ಕಟ್ಟಡ ಅಭಿವೃದ್ಧಿ ಹೀಗೆ ಹಲವು ಕಾಮಗಾರಿಗಳಿಗೆ ನಾನು ಶಾಸಕನಾದ ನಂತರ ಹಣ ಬಿಡುಗಡೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>‘ನಗರದ ಒಳಚರಂಡಿ ಯೋಜನೆ ಕಾಮಗಾರಿಗೆ ಈ ಹಿಂದೆ ನಾನು ಶಾಸಕನಾಗಿದ್ದಾಗ 2008ರಲ್ಲಿ ಮಂಜೂರಾತಿ ದೊರಕಿದ್ದು ₹70 ಕೋಟಿ ಅನುದಾನ ತಂದಿದ್ದೆ. ತದನಂತರ ಬೇರೆ ಬೇರೆ ಕಾರಣಗಳಿಗಾಗಿ ಈ ಯೋಜನೆ ನನೆಗುದಿಗೆ ಬಿದ್ದಿದ್ದು, ಇಂದಿಗೂ ಅದು ಪೂರ್ಣಗೊಂಡಿಲ್ಲ. ಯೋಜನೆ ಅನುಷ್ಠಾನಕ್ಕೆ ಹೆಚ್ಚುವರಿಯಾಗಿ ₹34 ಕೋಟಿ ಮಂಜೂರು ಮಾಡಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಪ್ರಮುಖರಾದ ಕೆ.ಹೊಳಿಯಪ್ಪ, ಸೋಮಶೇಖರ್ ಲ್ಯಾವಿಗೆರೆ, ತಾರಾಮೂರ್ತಿ, ಗಿರೀಶ್ ಕೋವಿ, ಕಲಸೆ ಚಂದ್ರಪ್ಪ, ಚೇತನ್ ರಾಜ್ ಕಣ್ಣೂರು , ರವಿ ವಿಜಯನಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಹಾಲಪ್ಪ ಹರತಾಳು ಅವರು ಸಾಗರ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಕೆಲವು ಹೊಸ ಯೋಜನೆಗಳು ಮಂಜೂರಾಗಿದ್ದವೇ ಹೊರತು ಯಾವ ಯೋಜನೆಗಳಿಗೂ ಹಣ ಬಿಡುಗಡೆ ಮಾಡಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p>.<p>ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುರುವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಪಿಎಂಸಿ ರಸ್ತೆ ಅಭಿವೃದ್ಧಿ, ಉಪ ಕಾರಾಗೃಹ ಕಟ್ಟಡ ಅಭಿವೃದ್ಧಿ, ಮೀನು ಮಾರುಕಟ್ಟೆ, ತಾಯಿ-ಮಗು ಆಸ್ಪತ್ರೆ ಕಟ್ಟಡ ಅಭಿವೃದ್ಧಿ ಹೀಗೆ ಹಲವು ಕಾಮಗಾರಿಗಳಿಗೆ ನಾನು ಶಾಸಕನಾದ ನಂತರ ಹಣ ಬಿಡುಗಡೆಯಾಗಿದೆ’ ಎಂದು ಅವರು ತಿಳಿಸಿದರು.</p>.<p>‘ನಗರದ ಒಳಚರಂಡಿ ಯೋಜನೆ ಕಾಮಗಾರಿಗೆ ಈ ಹಿಂದೆ ನಾನು ಶಾಸಕನಾಗಿದ್ದಾಗ 2008ರಲ್ಲಿ ಮಂಜೂರಾತಿ ದೊರಕಿದ್ದು ₹70 ಕೋಟಿ ಅನುದಾನ ತಂದಿದ್ದೆ. ತದನಂತರ ಬೇರೆ ಬೇರೆ ಕಾರಣಗಳಿಗಾಗಿ ಈ ಯೋಜನೆ ನನೆಗುದಿಗೆ ಬಿದ್ದಿದ್ದು, ಇಂದಿಗೂ ಅದು ಪೂರ್ಣಗೊಂಡಿಲ್ಲ. ಯೋಜನೆ ಅನುಷ್ಠಾನಕ್ಕೆ ಹೆಚ್ಚುವರಿಯಾಗಿ ₹34 ಕೋಟಿ ಮಂಜೂರು ಮಾಡಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಪ್ರಮುಖರಾದ ಕೆ.ಹೊಳಿಯಪ್ಪ, ಸೋಮಶೇಖರ್ ಲ್ಯಾವಿಗೆರೆ, ತಾರಾಮೂರ್ತಿ, ಗಿರೀಶ್ ಕೋವಿ, ಕಲಸೆ ಚಂದ್ರಪ್ಪ, ಚೇತನ್ ರಾಜ್ ಕಣ್ಣೂರು , ರವಿ ವಿಜಯನಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>