<p><strong>ಸಾಗರ</strong>: ಇಲ್ಲಿನ ಮಂಕಳಲೆಯ ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಆಚರಣೆಗೆ ತಡೆಯೊಡ್ಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಶಾಲೆಗೆ ಬಂದ ಪೋಷಕರು ಹಾಗೂ ಶಿಕ್ಷಕರೊಂದಿಗೆ ಪೊಲೀಸರು ಸಮಾಲೋಚನೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.</p>.<p>ಬುಧವಾರ ರಕ್ಷಾಬಂಧನದ ಹಿನ್ನೆಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿದರು. ಒಬ್ಬ ವಿದ್ಯಾರ್ಥಿನಿ ಎಲ್ಲರ ಎದುರು ವಿದ್ಯಾರ್ಥಿಯೊಬ್ಬನಿಗೆ ರಾಖಿ ಕಟ್ಟಿದ್ದರಿಂದ ವಿದ್ಯಾರ್ಥಿ ಮನನೊಂದು ಶೌಚಾಲಯದ ಕೊಠಡಿಗೆ ತೆರಳಿ ಅಳಲು ಆರಂಭಿಸಿದ್ದಾನೆ ಎನ್ನಲಾಗಿದೆ.</p>.<p>ಈ ವಿಷಯ ಶಾಲೆಯ ಶಿಕ್ಷಕ ವರ್ಗದವರಿಗೆ ತಿಳಿದು ಬಾಲಕನ ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸುವ ಜೊತೆಗೆ ಇತರ ವಿದ್ಯಾರ್ಥಿಗಳ ರಾಖಿಯನ್ನು ಸಹ ತೆಗೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳು ಮನೆಗೆ ತೆರಳಿ ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು.</p>.<p>ಇದರಿಂದ ಅಸಮಾಧಾನಗೊಂಡ ಕೆಲ ಪೋಷಕರು ಶಾಲೆಗೆ ಧಾವಿಸಿ ನಡೆದಿರುವ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಸ್ಥಳಕ್ಕೆ ಬಂದು ವಿದ್ಯಾರ್ಥಿಗಳು ಕಟ್ಟಿದ್ದ ರಾಖಿಯನ್ನು ತೆಗೆಸಿದ ಕ್ರಮವನ್ನು ಖಂಡಿಸಿದ್ದಾರೆ.</p>.<p>‘ಕಟ್ಟಿಸಿದ್ದ ರಾಖಿಯನ್ನು ಬಿಚ್ಚಿಸಿದ್ದಲ್ಲದೆ, ಮರುದಿನ ಬೆಳಿಗ್ಗೆ 11 ಗಂಟೆಯವರೆಗೂ ವಿದ್ಯಾರ್ಥಿಗಳನ್ನು ಶಾಲೆ ಕೊಠಡಿಯಿಂದ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಿದ್ದು ಎಷ್ಟು ಸರಿ’ ಎಂದು ಸ್ಥಳದಲ್ಲಿದ್ದವರು ಪ್ರಶ್ನಿಸಿದರು.</p>.<p>ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್, ಸರ್ಕಲ್ ಇನ್ಸ್ಪೆಕ್ಟರ್ ಸೀತಾರಾಮ್, ಕೃಷ್ಣಪ್ಪ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ತೆರಳಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕರು ನಡೆದಿರುವ ಘಟನೆಯ ಬಗ್ಗೆ ಕ್ಷಮೆ ಯಾಚಿಸಿದ ಕಾರಣ ಪ್ರಕರಣ ಸುಖಾಂತ್ಯಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಇಲ್ಲಿನ ಮಂಕಳಲೆಯ ಸಂತ ಜೋಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಆಚರಣೆಗೆ ತಡೆಯೊಡ್ಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಶಾಲೆಗೆ ಬಂದ ಪೋಷಕರು ಹಾಗೂ ಶಿಕ್ಷಕರೊಂದಿಗೆ ಪೊಲೀಸರು ಸಮಾಲೋಚನೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.</p>.<p>ಬುಧವಾರ ರಕ್ಷಾಬಂಧನದ ಹಿನ್ನೆಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿದರು. ಒಬ್ಬ ವಿದ್ಯಾರ್ಥಿನಿ ಎಲ್ಲರ ಎದುರು ವಿದ್ಯಾರ್ಥಿಯೊಬ್ಬನಿಗೆ ರಾಖಿ ಕಟ್ಟಿದ್ದರಿಂದ ವಿದ್ಯಾರ್ಥಿ ಮನನೊಂದು ಶೌಚಾಲಯದ ಕೊಠಡಿಗೆ ತೆರಳಿ ಅಳಲು ಆರಂಭಿಸಿದ್ದಾನೆ ಎನ್ನಲಾಗಿದೆ.</p>.<p>ಈ ವಿಷಯ ಶಾಲೆಯ ಶಿಕ್ಷಕ ವರ್ಗದವರಿಗೆ ತಿಳಿದು ಬಾಲಕನ ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸುವ ಜೊತೆಗೆ ಇತರ ವಿದ್ಯಾರ್ಥಿಗಳ ರಾಖಿಯನ್ನು ಸಹ ತೆಗೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳು ಮನೆಗೆ ತೆರಳಿ ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು.</p>.<p>ಇದರಿಂದ ಅಸಮಾಧಾನಗೊಂಡ ಕೆಲ ಪೋಷಕರು ಶಾಲೆಗೆ ಧಾವಿಸಿ ನಡೆದಿರುವ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಸ್ಥಳಕ್ಕೆ ಬಂದು ವಿದ್ಯಾರ್ಥಿಗಳು ಕಟ್ಟಿದ್ದ ರಾಖಿಯನ್ನು ತೆಗೆಸಿದ ಕ್ರಮವನ್ನು ಖಂಡಿಸಿದ್ದಾರೆ.</p>.<p>‘ಕಟ್ಟಿಸಿದ್ದ ರಾಖಿಯನ್ನು ಬಿಚ್ಚಿಸಿದ್ದಲ್ಲದೆ, ಮರುದಿನ ಬೆಳಿಗ್ಗೆ 11 ಗಂಟೆಯವರೆಗೂ ವಿದ್ಯಾರ್ಥಿಗಳನ್ನು ಶಾಲೆ ಕೊಠಡಿಯಿಂದ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಿದ್ದು ಎಷ್ಟು ಸರಿ’ ಎಂದು ಸ್ಥಳದಲ್ಲಿದ್ದವರು ಪ್ರಶ್ನಿಸಿದರು.</p>.<p>ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್, ಸರ್ಕಲ್ ಇನ್ಸ್ಪೆಕ್ಟರ್ ಸೀತಾರಾಮ್, ಕೃಷ್ಣಪ್ಪ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ತೆರಳಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕರು ನಡೆದಿರುವ ಘಟನೆಯ ಬಗ್ಗೆ ಕ್ಷಮೆ ಯಾಚಿಸಿದ ಕಾರಣ ಪ್ರಕರಣ ಸುಖಾಂತ್ಯಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>