<p><strong>ಶಿವಮೊಗ್ಗ:</strong> ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕೀಟನಾಶಕ ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ನೀಡಿದ ದೂರನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಠಾಣೆ ಪೊಲೀಸರು, ಶುಕ್ರವಾರ ಶಾಲೆಗೆ ತೆರಳಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p>.<h2>ಪ್ರಯೋಗಾಲಯಕ್ಕೆ ನೀರಿನ ಮಾದರಿ:</h2>.<p>‘ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇವೆ. ಅದರಲ್ಲಿ ಅಡುಗೆ ಮನೆಗೆ ನೇರ ಸಂಪರ್ಕ ಇರುವ ಟ್ಯಾಂಕ್ನಲ್ಲಿನ ನೀರಿನಲ್ಲಿ ಗುರುವಾರ ಕೀಟನಾಶಕದ ವಾಸನೆ ಬಂದಿತ್ತು. ಆರೋಗ್ಯ ಇಲಾಖೆ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದೆ’ ಎಂದು ಡಿಡಿಪಿಐ ಎಸ್.ಆರ್.ಮಂಜುನಾಥ್ ತಿಳಿಸಿದರು.</p>.<p>‘ಮತ್ತೊಂದು ಟ್ಯಾಂಕ್ ಶಾಲೆಯ ಕೈತೋಟಕ್ಕೆ ಸಂಪರ್ಕ ಹೊಂದಿದೆ. ನೀರು ಕುಡಿದಿದ್ದ 18 ವಿದ್ಯಾರ್ಥಿಗಳನ್ನು ಹೊಸನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸಂಜೆಯವರೆಗೂ ಎಲ್ಲರನ್ನೂ ನಿಗಾದಲ್ಲಿ ಇಡಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾಗಿ ಅವರು ಮಾಹಿತಿ ನೀಡಿದರು.</p>.<p>ಘಟನೆ ಹಿನ್ನೆಲೆಯಲ್ಲಿ ಶಾಲೆಗೆ ಎರಡು ದಿನ ರಜೆ ಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕೀಟನಾಶಕ ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ನೀಡಿದ ದೂರನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಠಾಣೆ ಪೊಲೀಸರು, ಶುಕ್ರವಾರ ಶಾಲೆಗೆ ತೆರಳಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.</p>.<h2>ಪ್ರಯೋಗಾಲಯಕ್ಕೆ ನೀರಿನ ಮಾದರಿ:</h2>.<p>‘ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇವೆ. ಅದರಲ್ಲಿ ಅಡುಗೆ ಮನೆಗೆ ನೇರ ಸಂಪರ್ಕ ಇರುವ ಟ್ಯಾಂಕ್ನಲ್ಲಿನ ನೀರಿನಲ್ಲಿ ಗುರುವಾರ ಕೀಟನಾಶಕದ ವಾಸನೆ ಬಂದಿತ್ತು. ಆರೋಗ್ಯ ಇಲಾಖೆ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದೆ’ ಎಂದು ಡಿಡಿಪಿಐ ಎಸ್.ಆರ್.ಮಂಜುನಾಥ್ ತಿಳಿಸಿದರು.</p>.<p>‘ಮತ್ತೊಂದು ಟ್ಯಾಂಕ್ ಶಾಲೆಯ ಕೈತೋಟಕ್ಕೆ ಸಂಪರ್ಕ ಹೊಂದಿದೆ. ನೀರು ಕುಡಿದಿದ್ದ 18 ವಿದ್ಯಾರ್ಥಿಗಳನ್ನು ಹೊಸನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸಂಜೆಯವರೆಗೂ ಎಲ್ಲರನ್ನೂ ನಿಗಾದಲ್ಲಿ ಇಡಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾಗಿ ಅವರು ಮಾಹಿತಿ ನೀಡಿದರು.</p>.<p>ಘಟನೆ ಹಿನ್ನೆಲೆಯಲ್ಲಿ ಶಾಲೆಗೆ ಎರಡು ದಿನ ರಜೆ ಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>