1991ರ ಭಾರತದ ಆರಾಧನಾ ಕಾಯ್ದೆ ಪ್ರಕಾರ 1942ರಿಂದ ಯಾವ ಸ್ಥಳಗಳಲ್ಲಿ ಮಸೀದಿ, ಚರ್ಚ್, ದೇವಾಲಯಗಳು ಇರುತ್ತವೆಯೋ ಅವುಗಳನ್ನು ಯಥಾಸ್ಥಿತಿಯಲ್ಲಿ ಬಿಡಬೇಕು. ಅವುಗಳಿಗೆ ರಕ್ಷಣೆ ನೀಡಬೇಕು ಎಂದಿದೆ. ಆದರೆ, ಕಾಯ್ದೆಯನ್ನು ಮೀರಿ ಕೋಮುವಾದಿ ಶಕ್ತಿಗಳು ದೇಶದಲ್ಲಿ ವಿಷಬೀಜ ಬಿತ್ತಿ, ಕೋಮು ಸೌಹಾರ್ದತೆಯನ್ನು ಹಾಳುಗೆಡವಿ, ಮುಸ್ಲಿಮರ ಪವಿತ್ರ ಸ್ಥಳಗಳಾದ ಮಸೀದಿಗಳನ್ನು ಧ್ವಂಸ ಮಾಡುವ ಹುನ್ನಾರ ನಡೆಸಿವೆ ಎಂದು ಆರೋಪಿಸಿದರು.