ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೀಲ್ಡೌನ್ ಆಗಿರುವ ಪ್ರದೇಶದ ದಿನನಿತ್ಯದ ಬೇಡಿಕೆಗಳನ್ನು ಪೂರೈಸುವಲ್ಲಿ ತಾಲ್ಲೂಕು ಆಡಳಿತ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮನೆಯೊಳಗೆ ಸ್ವಯಂ ನಿರ್ಬಂಧದಲ್ಲಿರುವ ಜನರ ಬೇಕು ಬೇಡಗಳನ್ನು ಸರಿಯಾದ ರೀತಿಯಲ್ಲಿ ಗಮನಿಸಿ ಅದಕ್ಕೆ ಸ್ಪಂದಿಸುವ ಜವಾಬ್ದಾರಿ ತಾಲ್ಲೂಕು ಆಡಳಿತದ್ದಾಗಿದೆ’ ಎಂದರು.