<p><strong>ರಿಪ್ಪನ್ಪೇಟೆ</strong>: ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಬುಧವಾರ ರೈತರು ಭೂ ತಾಯಿಯ ಸೀಮಂತ ಹಬ್ಬ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.</p>.<p>ಮಲೆನಾಡಿನಲ್ಲಿ ಜನರು ಪೂರ್ವಜರು ಆಚರಿಸಿಕೊಂಡು ಬಂದ ಪದ್ಧತಿಯಂತೆ ಭೂ ರಮೆಯ ಒಡಲು ತುಂಬಿದ ಈ ಹೊತ್ತಿನಲ್ಲಿ<br />ಬಯಕೆಯನ್ನು ಈಡೇರಿಸಲು ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ವಿಶೇಷ ಪೂಜೆ ಸಲ್ಲಿಸಿ, ಭೂಮಿ ಹುಣ್ಣಿಮೆ ಆಚರಿಸುವುದು ವಾಡಿಕೆ. ಭೂ ತಾಯಿಗೆ ಪೂಜೆ ಸಲ್ಲಿಸಿದ ರೈತರು ಮಣ್ಣಿನ ಮಕ್ಕಳ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು.</p>.<p>ರೈತರು ಹೊಲಗದ್ದೆಗಳ ಬದುವಿನ ಅಂಚಿನಲ್ಲಿ ಬೆಳೆದ ವಿವಿಧ ಜಾತಿಯ ಕಾಡು ಸೊಪ್ಪುಗಳನ್ನು ಸಂಗ್ರಹಿಸಿ ಹಿಂದಿನ ದಿನವೇ ಕುಟುಂಬದವರು ಒಟ್ಟಿಗೆ ಕುಳಿತು ಹಲವು ಬಗೆಯ ತರಕಾರಿಗಳನ್ನು ಮಿಶ್ರಣ ಮಾಡಿ ಬೇಯಿಸಿ ತಯಾರಿಸಿದ ಖಾದ್ಯ ( ಚರಗ ) ತಯಾರಿಸುತ್ತಾರೆ.ಅಲಂಕೃತ ಭೂಮಣ್ಣಿ ಬುಟ್ಟಿಯಲ್ಲಿ ಇಟ್ಟು ಹೊತ್ತು ಮೂಡುವ ಮುನ್ನ ಭೂ ತಾಯಿಗೆ ಪೂಜೆ ಸಲ್ಲಿಸಿ ಅದನ್ನು ಗದ್ದೆಯ ಗಡಿ ಅಂಚಿನಲ್ಲಿ ಬೀರುವ ಮೂಲಕ ಉತ್ತಮ ಬೆಳೆ ಸಿಗಲಿ ಎಂದು ಪ್ರಾರ್ಥಿಸಿದರು.</p>.<p>ನಂತರ ಕುಟುಂಬ ಪರಿವಾರದವರು ಒಟ್ಟಿಗೆ ಕುಳಿತು ಭೋಜನ ಸವಿದು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಬುಧವಾರ ರೈತರು ಭೂ ತಾಯಿಯ ಸೀಮಂತ ಹಬ್ಬ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.</p>.<p>ಮಲೆನಾಡಿನಲ್ಲಿ ಜನರು ಪೂರ್ವಜರು ಆಚರಿಸಿಕೊಂಡು ಬಂದ ಪದ್ಧತಿಯಂತೆ ಭೂ ರಮೆಯ ಒಡಲು ತುಂಬಿದ ಈ ಹೊತ್ತಿನಲ್ಲಿ<br />ಬಯಕೆಯನ್ನು ಈಡೇರಿಸಲು ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ವಿಶೇಷ ಪೂಜೆ ಸಲ್ಲಿಸಿ, ಭೂಮಿ ಹುಣ್ಣಿಮೆ ಆಚರಿಸುವುದು ವಾಡಿಕೆ. ಭೂ ತಾಯಿಗೆ ಪೂಜೆ ಸಲ್ಲಿಸಿದ ರೈತರು ಮಣ್ಣಿನ ಮಕ್ಕಳ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು.</p>.<p>ರೈತರು ಹೊಲಗದ್ದೆಗಳ ಬದುವಿನ ಅಂಚಿನಲ್ಲಿ ಬೆಳೆದ ವಿವಿಧ ಜಾತಿಯ ಕಾಡು ಸೊಪ್ಪುಗಳನ್ನು ಸಂಗ್ರಹಿಸಿ ಹಿಂದಿನ ದಿನವೇ ಕುಟುಂಬದವರು ಒಟ್ಟಿಗೆ ಕುಳಿತು ಹಲವು ಬಗೆಯ ತರಕಾರಿಗಳನ್ನು ಮಿಶ್ರಣ ಮಾಡಿ ಬೇಯಿಸಿ ತಯಾರಿಸಿದ ಖಾದ್ಯ ( ಚರಗ ) ತಯಾರಿಸುತ್ತಾರೆ.ಅಲಂಕೃತ ಭೂಮಣ್ಣಿ ಬುಟ್ಟಿಯಲ್ಲಿ ಇಟ್ಟು ಹೊತ್ತು ಮೂಡುವ ಮುನ್ನ ಭೂ ತಾಯಿಗೆ ಪೂಜೆ ಸಲ್ಲಿಸಿ ಅದನ್ನು ಗದ್ದೆಯ ಗಡಿ ಅಂಚಿನಲ್ಲಿ ಬೀರುವ ಮೂಲಕ ಉತ್ತಮ ಬೆಳೆ ಸಿಗಲಿ ಎಂದು ಪ್ರಾರ್ಥಿಸಿದರು.</p>.<p>ನಂತರ ಕುಟುಂಬ ಪರಿವಾರದವರು ಒಟ್ಟಿಗೆ ಕುಳಿತು ಭೋಜನ ಸವಿದು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>