ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಜಾರಿಗೆ ತಂದ ಲಾಕ್ಡೌನ್ ಪರಿಣಾಮ ಸಾರ್ವಜನಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಬಹಳಷ್ಟು ಜನರಿಗೆ ದುಡಿಮೆ ಇಲ್ಲವಾಗಿದೆ. ಹಾಗಾಗಿ, ಆಸ್ತಿ ತೆರಿಗೆ ಪಾವತಿ ಮೇಲೆ ಶೇ 5ರಷ್ಟು ರಿಯಾಯಿತಿ ನೀಡಲಾಗಿತ್ತು. ರಿಯಾಯಿತಿ ಸಮೇತ ಪಾವತಿ ಅವಧಿ ಮೇ 31ರವರೆಗೆ ನಿಗದಿ ಮಾಡಲಾಗಿತ್ತು. ಈಗ ಅವಧಿ ವಿಸ್ತರಿಸಿ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಆದೇಶಿಸಿದ್ದಾರೆ.