<p><strong>ಶಿವಮೊಗ್ಗ:</strong> ಇನ್ನು ಮುಂದೆ ಮೊಬೈಲ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ದೊರೆಯುವ ಸೇವಾ ಸೌಲಭ್ಯಗಳು ಸಿಗಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.</p>.<p>ಸರ್ಕಾರಿ ಸಂಘದ ನೌಕರರ ಭವನದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಆತಿಥ್ಯ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇನ್ನೂ ನಾಲ್ಕೈದು ತಿಂಗಳಲ್ಲಿ ಆನ್ಲೈನ್ನಲ್ಲಿ ನೌಕರರ ಮೆಡಿಕಲ್ ಸೌಲಭ್ಯ, ಪಾಸ್ಪೋರ್ಟ್ ಸೌಲಭ್ಯಗಳು, ಚೆಕ್ಲಿಸ್ಟ್ ಸೌಲಭ್ಯಗಳು ಸೇರಿ ಅನೇಕ ಸೇವೆಗಳು ದೊರೆಯಲಿದೆ. ಇದರಿಂದ ನೌಕರರ ಸಮಯ ಉಳಿತಾಯ ಹಾಗೂ ಸರ್ಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರವನ್ನೂ ತಡೆಯುವಂತಾಗಲಿದೆ ಎಂದರು.</p>.<p>ಉಪನ್ಯಾಸಕರ ಬೇಡಿಕೆಯಾದ ಕುಮಾರ ನಾಯ್ಕ್ ವರದಿ ಅನುಷ್ಠಾನ, ವರ್ಗಾವಣೆ ಮೊದಲಾದ ಬೇಡಿಕೆ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ‘ವಿದ್ಯಾಗಮ ಯೋಜನೆ ಅವೈಜ್ಞಾನಿಕವಾಗಿದ್ದು, ಅನೇಕ ಜನ ಶಿಕ್ಷಕರು ಯೋಜನೆಯಿಂದ ಕೊರೊನಾಗೆ ಒಳಗಾಗಿದ್ದಾರೆ’ ಎಂದು ದೂರಿದರು.</p>.<p>ಈಗಾಗಲೇ ಶಾಲೆಗಳಿಗೆ ಅ.30 ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಕರಿಗೆ ಅ.20ರ ನಂತರ ರಜೆ ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ. ಈ ಅನ್ಯಾಯ ಸಹಿಸಲು ಸಾಧ್ಯವಾ ಎಂದು ಪ್ರಶ್ನಿಸಿದರು.</p>.<p>ಅತಿಥಿ ಉಪನ್ಯಾಸಕರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇನ್ನು ಮುಂದೆ ಮೊಬೈಲ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ದೊರೆಯುವ ಸೇವಾ ಸೌಲಭ್ಯಗಳು ಸಿಗಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.</p>.<p>ಸರ್ಕಾರಿ ಸಂಘದ ನೌಕರರ ಭವನದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಆತಿಥ್ಯ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇನ್ನೂ ನಾಲ್ಕೈದು ತಿಂಗಳಲ್ಲಿ ಆನ್ಲೈನ್ನಲ್ಲಿ ನೌಕರರ ಮೆಡಿಕಲ್ ಸೌಲಭ್ಯ, ಪಾಸ್ಪೋರ್ಟ್ ಸೌಲಭ್ಯಗಳು, ಚೆಕ್ಲಿಸ್ಟ್ ಸೌಲಭ್ಯಗಳು ಸೇರಿ ಅನೇಕ ಸೇವೆಗಳು ದೊರೆಯಲಿದೆ. ಇದರಿಂದ ನೌಕರರ ಸಮಯ ಉಳಿತಾಯ ಹಾಗೂ ಸರ್ಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರವನ್ನೂ ತಡೆಯುವಂತಾಗಲಿದೆ ಎಂದರು.</p>.<p>ಉಪನ್ಯಾಸಕರ ಬೇಡಿಕೆಯಾದ ಕುಮಾರ ನಾಯ್ಕ್ ವರದಿ ಅನುಷ್ಠಾನ, ವರ್ಗಾವಣೆ ಮೊದಲಾದ ಬೇಡಿಕೆ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ‘ವಿದ್ಯಾಗಮ ಯೋಜನೆ ಅವೈಜ್ಞಾನಿಕವಾಗಿದ್ದು, ಅನೇಕ ಜನ ಶಿಕ್ಷಕರು ಯೋಜನೆಯಿಂದ ಕೊರೊನಾಗೆ ಒಳಗಾಗಿದ್ದಾರೆ’ ಎಂದು ದೂರಿದರು.</p>.<p>ಈಗಾಗಲೇ ಶಾಲೆಗಳಿಗೆ ಅ.30 ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಕರಿಗೆ ಅ.20ರ ನಂತರ ರಜೆ ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ. ಈ ಅನ್ಯಾಯ ಸಹಿಸಲು ಸಾಧ್ಯವಾ ಎಂದು ಪ್ರಶ್ನಿಸಿದರು.</p>.<p>ಅತಿಥಿ ಉಪನ್ಯಾಸಕರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>