ವೈದ್ಯಕೀಯ ವ್ಯಾಸಂಗ ಪೂರ್ಣಗೊಂಡಿರುವುದರಿಂದ ಜುಲೈ 15ರಂದು ನಿರಾಕ್ಷೇಪಣಾ ಪತ್ರ (ಎನ್ಒಸಿ) ಪಡೆಯಲು ಸಹ ಪ್ರಾಧ್ಯಾಪಕರ ಬಳಿ ತೆರಳಿದ್ದಾಗ, ಅವರು ಅಸಭ್ಯವಾಗಿ ವರ್ತಿಸಿ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದರು ಎಂದು ವಿದ್ಯಾರ್ಥಿನಿಯು ದೂರು ಸಲ್ಲಿಸಿದ್ದರು. ಈ ಬಗ್ಗೆ ಜುಲೈ 16ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.