ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ: ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Last Updated 20 ಏಪ್ರಿಲ್ 2022, 5:05 IST
ಅಕ್ಷರ ಗಾತ್ರ

ಕುಂಸಿ: ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕುಂಸಿ ಸಮೀಪದ ಆಯನೂರಿನ ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ. ತಾಂಡಾದ ಮಹಿಳೆಯೊಬ್ಬರ ಪತಿ ನಾಲ್ಕು ದಿನದಿಂದ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ ಸೋಮವಾರ ತಡರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಆ ಬಳಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ. ನಿದ್ರೆಯಿಂದ ಎಚ್ಚರಗೊಂಡ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾರೆ.

ಈ ವೇಳೆ ಪಕ್ಕದ ಕೋಣೆಯಲ್ಲಿ ಮಲಗಿದ್ದ ಮಹಿಳೆಯ ಮಾವ ಎಚ್ಚರಗೊಂಡು ಸೊಸೆಯ ಕೋಣೆಗೆ ಹೋಗಿದ್ದಾರೆ. ಆಗ ಸುಂದರ್ ನಾಯ್ಕ ಅಲ್ಲಿಂದ ಪರಾರಿಯಾಗಿದ್ದಾನೆ.

ಮಂಗಳವಾರ ಬೆಳಿಗ್ಗೆ ವಿಷಯ ತಿಳಿದ ಗ್ರಾಮಸ್ಥರು ಸುಂದರ್ ನಾಯ್ಕನನ್ನು ಸೆರೆಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT