<p>ಸಾಗರ: ‘ತಾಲ್ಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಸಂಘಟನೆಯು ಭೂ ಸುಧಾರಣಾ ಕಾಯ್ದೆಯ ಸುವರ್ಣ ಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ಮಾರ್ಚ್ 1 ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದ್ದಾರೆ.</p>.<p>ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಹಿರಿಯ ಸಮಾಜವಾದಿ ಮುಖಂಡ ಬಿ.ಆರ್.ಜಯಂತ್ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಭೂ ಸುಧಾರಣಾ ಕಾಯ್ದೆ ಜಾರಿಯಿಂದ 4.85 ಲಕ್ಷ ರೈತ ಕುಟುಂಬಗಳಿಗೆ ಭೂಮಿಯ ಹಕ್ಕು ದೊರಕಿದೆ. ಈಗ ಆ ಕುಟುಂಬಗಳ ಸಂಖ್ಯೆ 30 ಲಕ್ಷ ದಾಟಿದೆ. ಕಾಯ್ದೆಯಿಂದಾಗಿ ಭೂಮಿಯ ಹಕ್ಕು ಪಡೆದವರು ಕಾಯ್ದೆಯ ಜಾರಿಗೆ ಕಾರಣರಾದವರನ್ನು ಮರೆತಿರುವುದು ಬೇಸರದ ಸಂಗತಿ’ ಎಂದು ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ್ ಈ. ಕೆಳದಿ ಹೇಳಿದರು.</p>.<p>ಪ್ರಮುಖರಾದ ಭದ್ರೇಶ್ ಬಾಳಗೋಡು, ಕುಮಾರ್ ಗೌಡ, ಚಂದ್ರಪ್ಪ ಆಲಳ್ಳಿ, ರಾಮಚಂದ್ರಪ್ಪ, ಚಂದ್ರಶೇಖರ ಗೌಡ, ಶಿವು ಮೈಲಾರಿಕೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ತಾಲ್ಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಸಂಘಟನೆಯು ಭೂ ಸುಧಾರಣಾ ಕಾಯ್ದೆಯ ಸುವರ್ಣ ಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ಮಾರ್ಚ್ 1 ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದ್ದಾರೆ.</p>.<p>ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಹಿರಿಯ ಸಮಾಜವಾದಿ ಮುಖಂಡ ಬಿ.ಆರ್.ಜಯಂತ್ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಭೂ ಸುಧಾರಣಾ ಕಾಯ್ದೆ ಜಾರಿಯಿಂದ 4.85 ಲಕ್ಷ ರೈತ ಕುಟುಂಬಗಳಿಗೆ ಭೂಮಿಯ ಹಕ್ಕು ದೊರಕಿದೆ. ಈಗ ಆ ಕುಟುಂಬಗಳ ಸಂಖ್ಯೆ 30 ಲಕ್ಷ ದಾಟಿದೆ. ಕಾಯ್ದೆಯಿಂದಾಗಿ ಭೂಮಿಯ ಹಕ್ಕು ಪಡೆದವರು ಕಾಯ್ದೆಯ ಜಾರಿಗೆ ಕಾರಣರಾದವರನ್ನು ಮರೆತಿರುವುದು ಬೇಸರದ ಸಂಗತಿ’ ಎಂದು ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ್ ಈ. ಕೆಳದಿ ಹೇಳಿದರು.</p>.<p>ಪ್ರಮುಖರಾದ ಭದ್ರೇಶ್ ಬಾಳಗೋಡು, ಕುಮಾರ್ ಗೌಡ, ಚಂದ್ರಪ್ಪ ಆಲಳ್ಳಿ, ರಾಮಚಂದ್ರಪ್ಪ, ಚಂದ್ರಶೇಖರ ಗೌಡ, ಶಿವು ಮೈಲಾರಿಕೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>