<p><strong>ಸಾಗರ:</strong> ಶಸ್ತ್ರ ಹಿಡಿಯದೇ ಶಾಸ್ತ್ರದ ಮೂಲಕವೇ ಧರ್ಮ ಪ್ರತಿಷ್ಠಾಪನೆ ಮಾಡಿದ್ದು ಶಂಕರಾಚಾರ್ಯರ ಹೆಗ್ಗಳಿಕೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು.</p>.<p>ಇಲ್ಲಿನ ಶೃಂಗೇರಿ ಶಂಕರ ಮಠದ ಭಾರತೀತೀರ್ಥ ಸಭಾಭವನದಲ್ಲಿ ನವರಾತ್ರಿ ಅಂಗವಾಗಿ ಶನಿವಾರ<br />ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ‘ಶಾರದಾ ಪುರಸ್ಕಾರ’ ಪ್ರದಾನ ಮಾಡಿ ಮಾತನಾಡಿದರು.</p>.<p>ಸನಾತನ ಧರ್ಮವನ್ನು ಪ್ರತಿಷ್ಠಾಪಿಸಿ ಅದು ಜನಮಾನಸದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಶಂಕರಾಚಾರ್ಯರಿಗೆ ಸಲ್ಲುತ್ತದೆ. ಕಾಶ್ಮೀರದಿಂದ ಶಾರದಾ ದೇವಿಯನ್ನು ಶೃಂಗೇರಿಗೆ ತಂದು ಪ್ರತಿಷ್ಠಾಪನೆ ಮಾಡಿ ಧರ್ಮದ ಕೈಂಕರ್ಯ ಕೈಗೊಂಡ ಶಂಕರಾಚಾರ್ಯರ ಕಾರ್ಯ ಸ್ಮರಣೀಯ ಎಂದರು.</p>.<p>ಸಾಹಿತಿ ಎಚ್.ಎಂ. ತಿಮ್ಮಪ್ಪ ಕಲಸಿ, ಎಸ್. ಗಜಾನನ ಜೋಯಿಸ್, ಕಲಾ ಪೋಷಕ ಕಟ್ಟಿನಕೆರೆ ಸುಬ್ರಾವ್, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್. ನಾಗೇಂದ್ರ ಅವರಿಗೆ ‘ಶಾರದಾ ಪ್ರಸಾದ’ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಹೊಸಗುಂದದ ಉಮಾಮಹೇಶ್ವರ ಸೇವಾ ಟ್ರಸ್ಟ್ ಮುಖ್ಯಸ್ಥ ಸಿ.ಎಂ.ಎನ್. ಶಾಸ್ತ್ರಿ, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಸದಸ್ಯ ಬಿ.ಎಚ್. ಲಿಂಗರಾಜ್, ಸುಪ್ರತೀಕ್ ಭಟ್, ಶ್ರೀಧರ್, ಎಸ್.ಕೆ. ಪ್ರಭಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಶಸ್ತ್ರ ಹಿಡಿಯದೇ ಶಾಸ್ತ್ರದ ಮೂಲಕವೇ ಧರ್ಮ ಪ್ರತಿಷ್ಠಾಪನೆ ಮಾಡಿದ್ದು ಶಂಕರಾಚಾರ್ಯರ ಹೆಗ್ಗಳಿಕೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು.</p>.<p>ಇಲ್ಲಿನ ಶೃಂಗೇರಿ ಶಂಕರ ಮಠದ ಭಾರತೀತೀರ್ಥ ಸಭಾಭವನದಲ್ಲಿ ನವರಾತ್ರಿ ಅಂಗವಾಗಿ ಶನಿವಾರ<br />ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ‘ಶಾರದಾ ಪುರಸ್ಕಾರ’ ಪ್ರದಾನ ಮಾಡಿ ಮಾತನಾಡಿದರು.</p>.<p>ಸನಾತನ ಧರ್ಮವನ್ನು ಪ್ರತಿಷ್ಠಾಪಿಸಿ ಅದು ಜನಮಾನಸದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಶಂಕರಾಚಾರ್ಯರಿಗೆ ಸಲ್ಲುತ್ತದೆ. ಕಾಶ್ಮೀರದಿಂದ ಶಾರದಾ ದೇವಿಯನ್ನು ಶೃಂಗೇರಿಗೆ ತಂದು ಪ್ರತಿಷ್ಠಾಪನೆ ಮಾಡಿ ಧರ್ಮದ ಕೈಂಕರ್ಯ ಕೈಗೊಂಡ ಶಂಕರಾಚಾರ್ಯರ ಕಾರ್ಯ ಸ್ಮರಣೀಯ ಎಂದರು.</p>.<p>ಸಾಹಿತಿ ಎಚ್.ಎಂ. ತಿಮ್ಮಪ್ಪ ಕಲಸಿ, ಎಸ್. ಗಜಾನನ ಜೋಯಿಸ್, ಕಲಾ ಪೋಷಕ ಕಟ್ಟಿನಕೆರೆ ಸುಬ್ರಾವ್, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್. ನಾಗೇಂದ್ರ ಅವರಿಗೆ ‘ಶಾರದಾ ಪ್ರಸಾದ’ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಹೊಸಗುಂದದ ಉಮಾಮಹೇಶ್ವರ ಸೇವಾ ಟ್ರಸ್ಟ್ ಮುಖ್ಯಸ್ಥ ಸಿ.ಎಂ.ಎನ್. ಶಾಸ್ತ್ರಿ, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಸದಸ್ಯ ಬಿ.ಎಚ್. ಲಿಂಗರಾಜ್, ಸುಪ್ರತೀಕ್ ಭಟ್, ಶ್ರೀಧರ್, ಎಸ್.ಕೆ. ಪ್ರಭಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>