‘ಶಾಂತವೇರಿ ಗೋಪಾಲಗೌಡರ ಜೀವನದ ಮುಖ್ಯ ಘಟನೆಗಳನ್ನು ಆಯ್ದುಕೊಂಡು ಸಾಕ್ಷ್ಯಚಿತ್ರ ಮಾಡಿ, ಶಾಲಾ-ಕಾಲೇಜುಗಳಲ್ಲಿ ಬಿತ್ತರಿಸುವ ಜತೆಗೆ ಕೈಪಿಡಿ ವಿತರಿಸಲಾಗುವುದು. ಜತೆಗೆ, ವೆಬ್ಸೈಟ್ ಸಹ ರೂಪಿಸಲು ಉದ್ದೇಶಿಸಲಾಗಿದೆ.ಹಿರಿಯ ರಾಜಕಾರಣಿಗಳಿಗೆ ಅವರ ವ್ಯಕ್ತಿತ್ವ ಚಿರಪರಿಚಿತ. ಆದರೆ, ಇಂದಿನ ವಿದ್ಯಾರ್ಥಿಗಳಿಗೆ ಅಪರಿಚಿತ. ಹೀಗಾಗಿ, ಈ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ’ ಎಂದು ತಿಳಿಸಿದರು.