<p><strong>ಸಾಗರ:</strong> ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶರಾವತಿ ನದಿಯ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ತಾಲ್ಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ₹ 1.70 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಬೂದುಬಣ್ಣದ ನೀರು ನಿರ್ವಹಣಾ ಯೋಜನೆಯನ್ನು ಜಾರಿಗೆ ತಂದಿದ್ದು, ಆವಿನಹಳ್ಳಿ ಪಂಚಾಯಿತಿ ಸೇರಿ ತಾಲ್ಲೂಕಿನ 13 ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಯೋಜನೆಯ ಸಾಧಕ–ಬಾಧಕಗಳ ಕುರಿತು ಶೀಘ್ರದಲ್ಲಿಯೇ ಪ್ರಮುಖರ ಸಭೆಯನ್ನು ಕರೆಯಲಾಗುವುದು ಎಂದು ಅವರು ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಸಾವಿರಕ್ಕೂ ಅಧಿಕ ಕಾಮಗಾರಿಗಳು ನಡೆಯುತ್ತಿವೆ. ಆವಿನಹಳ್ಳಿ ಹೋಬಳಿಗೆ ₹ 44 ಕೋಟಿ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಕಾಮಗಾರಿಗಳ ಗುಣಮಟ್ಟ ಕಾಯಲು ಆದ್ಯತೆ ನೀಡಲಾಗಿದೆ ಎಂದರು.</p>.<p>ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್ ಜಿ.ಬಿ., ಉಪಾಧ್ಯಕ್ಷೆ ಸಫಿಯಾ ಎ.ಎಂ., ಸದಸ್ಯರಾದ ಶಶಿಕಲಾ, ಸುರೇಶ್, ರಾಜು ಪಟೇಲ್, ಸವಿತಾ ರಾಮಚಂದ್ರ, ಇಂದಿರಾ ಗಣೇಶ್, ಅಶೋಕ್, ಜಯಲಕ್ಷ್ಮಿ ಧರಣೇಂದ್ರ, ಸತೀಶ್, ಲೋಕೇಶ್, ಕುಮಾರ್, ಸುಜಾತ ಹಾಲಪ್ಪ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶರಾವತಿ ನದಿಯ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ತಾಲ್ಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ₹ 1.70 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಬೂದುಬಣ್ಣದ ನೀರು ನಿರ್ವಹಣಾ ಯೋಜನೆಯನ್ನು ಜಾರಿಗೆ ತಂದಿದ್ದು, ಆವಿನಹಳ್ಳಿ ಪಂಚಾಯಿತಿ ಸೇರಿ ತಾಲ್ಲೂಕಿನ 13 ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಯೋಜನೆಯ ಸಾಧಕ–ಬಾಧಕಗಳ ಕುರಿತು ಶೀಘ್ರದಲ್ಲಿಯೇ ಪ್ರಮುಖರ ಸಭೆಯನ್ನು ಕರೆಯಲಾಗುವುದು ಎಂದು ಅವರು ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಸಾವಿರಕ್ಕೂ ಅಧಿಕ ಕಾಮಗಾರಿಗಳು ನಡೆಯುತ್ತಿವೆ. ಆವಿನಹಳ್ಳಿ ಹೋಬಳಿಗೆ ₹ 44 ಕೋಟಿ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಕಾಮಗಾರಿಗಳ ಗುಣಮಟ್ಟ ಕಾಯಲು ಆದ್ಯತೆ ನೀಡಲಾಗಿದೆ ಎಂದರು.</p>.<p>ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್ ಜಿ.ಬಿ., ಉಪಾಧ್ಯಕ್ಷೆ ಸಫಿಯಾ ಎ.ಎಂ., ಸದಸ್ಯರಾದ ಶಶಿಕಲಾ, ಸುರೇಶ್, ರಾಜು ಪಟೇಲ್, ಸವಿತಾ ರಾಮಚಂದ್ರ, ಇಂದಿರಾ ಗಣೇಶ್, ಅಶೋಕ್, ಜಯಲಕ್ಷ್ಮಿ ಧರಣೇಂದ್ರ, ಸತೀಶ್, ಲೋಕೇಶ್, ಕುಮಾರ್, ಸುಜಾತ ಹಾಲಪ್ಪ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>