ಹಲವು ವರ್ಷಗಳಿಂದ ಈಚೆಗೆ ಮಲೆನಾಡಿನಲ್ಲಿ ಮಳೆ ತೀವ್ರ ಕಡಿಮೆಯಾಗಿದೆ. ಜಲಾಶಯಗಳೂ ತುಂಬುತ್ತಿಲ್ಲ. ವಿದ್ಯುತ್ ಉತ್ಪಾದನೆಗೂ ನೀರು ಇಲ್ಲ. ಹೀಗಿರುವಾಗ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವುದು ಹೇಗೆ ಸಾಧ್ಯ? ಲಿಂಗನಮಕ್ಕಿ ಯೋಜನೆಯಿಂದ ಈಗಾಗಲೇ ಸಾವಿರಾರು ಜನರು ಮನೆ-, ಆಸ್ತಿ ಕಳೆದುಕೊಂಡಿದ್ದಾರೆ. ನಾಡಿಗೆ ಬೆಳಕು ಕೊಟ್ಟು ಅವರು ಕತ್ತಲಲ್ಲಿ ಇದ್ದಾರೆ. ಗಾಯದ ಮೇಲೆ ಬರೆ ಎಂಬಂತೆ ಮತ್ತೆ ಈ ಯೋಜನೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.