<p><strong>ತ್ಯಾಗರ್ತಿ:</strong> ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನದಿಂದ ಅರಣ್ಯ ನಾಶದ ಜೊತೆಗೆ ರೈತರಿಗೂ ಸಂಕಷ್ಟ ಉಂಟಾಗುತ್ತದೆ ಎಂದು ಬಿಜೆಪಿ ಮುಖಂಡ ಮತ್ತು ಜಿ.ಪಂ. ಮಾಜಿ ಸದಸ್ಯ ರತ್ನಾಕರ ಹೊನಗೋಡು ಹೇಳಿದರು.</p>.<p>ಆನಂದಪುರದ ಮುಖ್ಯ ಬಸ್ ನಿಲ್ದಾಣದ ವೃತ್ತದಲ್ಲಿ ಮಂಗಳವಾರ ಶರವಾತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ನೆಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಇದೊಂದು ಅವೈಜ್ಞಾನಿಕ ಯೋಜನೆಯಾಗಿದ್ದು, ಈ ಯೋಜನೆಯಿಂದ ರೈತರು ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಬೀದಿಗೆ ಬೀಳುವಂತಾಗುತ್ತದೆ. ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಮಗಾರಿ ನೆಪದಲ್ಲಿ ದೊಡ್ಡ ಮೊತ್ತದ ಹಣ ಲೂಟಿ ಮಾಡಲು ರೂಪಿಸಿದ ತಂತ್ರವಾಗಿದೆ. ಇದೊಂದು ನಿಷ್ಪ್ರಯೋಜಕ ಯೋಜನೆಯಾಗಿದ್ದು, ನೂರಾರು ರೈತರೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ ಎಂದರು.</p>.<p>ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಶಾಂತಕುಮಾರ ಗೌಡ, ಪ್ರಮುಖರಾದ ಜಿ.ಪಂ. ಮಾಜಿ ಸದಸ್ಯ ಭರ್ಮಪ್ಪ ಅಂದಾಸುರ, ಹಿರಣ್ಯಪ್ಪ ಸಂಗಣ್ಣನಕೆರೆ, ರವಿಕುಮಾರ ಗೌತಮಪುರ, ಧನರಾಜ್ ಭೈರಾಪುರ, ಗಂಗಾಧರ ಕೆಂಜಗಾಪುರ ಇನ್ನಿತರರು ಇದ್ದರು.</p>.ಶರಾವತಿ ಕಣಿವೆಗೆ ಸುರಂಗ: ಅಭಯಾರಣ್ಯದಲ್ಲೇ ‘ಅಪಾಯಕಾರಿ’ ಯೋಜನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾಗರ್ತಿ:</strong> ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನದಿಂದ ಅರಣ್ಯ ನಾಶದ ಜೊತೆಗೆ ರೈತರಿಗೂ ಸಂಕಷ್ಟ ಉಂಟಾಗುತ್ತದೆ ಎಂದು ಬಿಜೆಪಿ ಮುಖಂಡ ಮತ್ತು ಜಿ.ಪಂ. ಮಾಜಿ ಸದಸ್ಯ ರತ್ನಾಕರ ಹೊನಗೋಡು ಹೇಳಿದರು.</p>.<p>ಆನಂದಪುರದ ಮುಖ್ಯ ಬಸ್ ನಿಲ್ದಾಣದ ವೃತ್ತದಲ್ಲಿ ಮಂಗಳವಾರ ಶರವಾತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ನೆಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಇದೊಂದು ಅವೈಜ್ಞಾನಿಕ ಯೋಜನೆಯಾಗಿದ್ದು, ಈ ಯೋಜನೆಯಿಂದ ರೈತರು ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಬೀದಿಗೆ ಬೀಳುವಂತಾಗುತ್ತದೆ. ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಮಗಾರಿ ನೆಪದಲ್ಲಿ ದೊಡ್ಡ ಮೊತ್ತದ ಹಣ ಲೂಟಿ ಮಾಡಲು ರೂಪಿಸಿದ ತಂತ್ರವಾಗಿದೆ. ಇದೊಂದು ನಿಷ್ಪ್ರಯೋಜಕ ಯೋಜನೆಯಾಗಿದ್ದು, ನೂರಾರು ರೈತರೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ ಎಂದರು.</p>.<p>ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಶಾಂತಕುಮಾರ ಗೌಡ, ಪ್ರಮುಖರಾದ ಜಿ.ಪಂ. ಮಾಜಿ ಸದಸ್ಯ ಭರ್ಮಪ್ಪ ಅಂದಾಸುರ, ಹಿರಣ್ಯಪ್ಪ ಸಂಗಣ್ಣನಕೆರೆ, ರವಿಕುಮಾರ ಗೌತಮಪುರ, ಧನರಾಜ್ ಭೈರಾಪುರ, ಗಂಗಾಧರ ಕೆಂಜಗಾಪುರ ಇನ್ನಿತರರು ಇದ್ದರು.</p>.ಶರಾವತಿ ಕಣಿವೆಗೆ ಸುರಂಗ: ಅಭಯಾರಣ್ಯದಲ್ಲೇ ‘ಅಪಾಯಕಾರಿ’ ಯೋಜನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>