<p><strong>ಸಾಗರ: ಪರಿಸರ ನಾಶ ಮಾಡಿ ವಿದ್ಯುತ್ ಉತ್ಪಾದಿಸುವ ಶರಾವತಿ ಪಂಪ್ಡ್ ಸ್ಟೋರೇಜ್ ನಂತಹ ಯೋಜನೆಗಳು ನಮಗೆ ಬೇಕಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದರು. </strong></p>.<p><strong>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿಯ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸೋಮವಾರ ಅವರು ಮಾತನಾಡಿದರು.</strong></p>.<p><strong>ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಂಗಗಳನ್ನು ಕೊರೆದು ಅಪಾರ ಸಂಖ್ಯೆಯಲ್ಲಿ ಮರಗಳು, ಜೀವವೈವಿಧ್ಯವನ್ನು ನಾಶಗೊಳಿಸಿ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಎಂಬುದು ಮೂರ್ಖತನದ ನಿರ್ಧಾರ. ನಮ್ಮ ಹಾಗೆಯೆ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕು ಇದೆ ಎಂಬುದನ್ನು ಸರ್ಕಾರ ಮರೆಯಬಾರದು ಎಂದರು.</strong></p>.<p><strong>ಪಕ್ಷಾತೀತವಾಗಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸುವ ಮನಸ್ಥಿತಿ ಎಲ್ಲಾ ಪಕ್ಷದವರು ಬೆಳೆಸಿಕೊಳ್ಳಬೇಕು. ಸ್ಥಳೀಯ ಶಾಸಕರು, ಸಂಸದರು ಈ ಯೋಜನೆ ನಿಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು. </strong></p>.<p><strong>‘ಈ ಭಾಗದ ಜನರು ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದಾಗ್ಯೂ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಿಧಾನಸಭೆಯ ಅಧಿವೇಶನದಲ್ಲಿ ಯೋಜನೆಯ ಪರವಾಗಿ ಮಾತನಾಡಿರುವುದು ಬೇಸರದ ಸಂಗತಿ’ ಎಂದು ಬಿಜೆಪಿ ಮುಖಂಡ ಪ್ರಸನ್ನ ಕೆರೆಕೈ ಹೇಳಿದರು.</strong></p>.<p><strong>ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ರಮೇಶ್ ಕೆಳದಿ, ತೀ.ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ಅಖಿಲೇಶ್ ಚಿಪ್ಪಳಿ, ಕಬಸೆ ಅಶೋಕಮೂರ್ತಿ, ರಾಮಚಂದ್ರಪ್ಪ, ಸ್ವಾಮಿಗೌಡ, ಭದ್ರೇಶ್ ಬಾಳಗೋಡು, ಗಣಪತಿ ಹೆನಗೆರೆ, ಶ್ರೀಪಾದ ಬಿಚ್ಚುಗತ್ತಿ, ಕವಲಕೋಡು ವೆಂಕಟೇಶ್ ಇದ್ದರು.</strong></p>.<p><strong>ಹೋರಾಟದಲ್ಲಿ ಶತಾಯುಷಿ ಬಂಗಾರಮ್ಮ</strong> </p><p>ಸಾಗರ ತಾಲ್ಲೂಕಿನ ನೇರಲಗಿ ಗ್ರಾಮದ 100 ವರ್ಷದ ವೃದ್ಧೆ ಬಂಗಾರಮ್ಮ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿ ಹೋರಾಟದಲ್ಲಿ ಸೋಮವಾರ ಭಾಗಿಯಾಗಿದ್ದರು. ಯೋಜನೆ ವಿರೋಧಿಸುವ ಸಹಿ ಸಂಗ್ರಹದ ಫಲಕಕ್ಕೆ ತಮ್ಮ ಹೆಬ್ಬೆಟ್ಟು ಒತ್ತುವ ಮೂಲಕ ಅವರು ಯೋಜನೆಗೆ ವಿರೋಧ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಪರಿಸರ ನಾಶ ಮಾಡಿ ವಿದ್ಯುತ್ ಉತ್ಪಾದಿಸುವ ಶರಾವತಿ ಪಂಪ್ಡ್ ಸ್ಟೋರೇಜ್ ನಂತಹ ಯೋಜನೆಗಳು ನಮಗೆ ಬೇಕಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದರು. </strong></p>.<p><strong>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿಯ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸೋಮವಾರ ಅವರು ಮಾತನಾಡಿದರು.</strong></p>.<p><strong>ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಂಗಗಳನ್ನು ಕೊರೆದು ಅಪಾರ ಸಂಖ್ಯೆಯಲ್ಲಿ ಮರಗಳು, ಜೀವವೈವಿಧ್ಯವನ್ನು ನಾಶಗೊಳಿಸಿ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಎಂಬುದು ಮೂರ್ಖತನದ ನಿರ್ಧಾರ. ನಮ್ಮ ಹಾಗೆಯೆ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕು ಇದೆ ಎಂಬುದನ್ನು ಸರ್ಕಾರ ಮರೆಯಬಾರದು ಎಂದರು.</strong></p>.<p><strong>ಪಕ್ಷಾತೀತವಾಗಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸುವ ಮನಸ್ಥಿತಿ ಎಲ್ಲಾ ಪಕ್ಷದವರು ಬೆಳೆಸಿಕೊಳ್ಳಬೇಕು. ಸ್ಥಳೀಯ ಶಾಸಕರು, ಸಂಸದರು ಈ ಯೋಜನೆ ನಿಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು. </strong></p>.<p><strong>‘ಈ ಭಾಗದ ಜನರು ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದಾಗ್ಯೂ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಿಧಾನಸಭೆಯ ಅಧಿವೇಶನದಲ್ಲಿ ಯೋಜನೆಯ ಪರವಾಗಿ ಮಾತನಾಡಿರುವುದು ಬೇಸರದ ಸಂಗತಿ’ ಎಂದು ಬಿಜೆಪಿ ಮುಖಂಡ ಪ್ರಸನ್ನ ಕೆರೆಕೈ ಹೇಳಿದರು.</strong></p>.<p><strong>ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ರಮೇಶ್ ಕೆಳದಿ, ತೀ.ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ಅಖಿಲೇಶ್ ಚಿಪ್ಪಳಿ, ಕಬಸೆ ಅಶೋಕಮೂರ್ತಿ, ರಾಮಚಂದ್ರಪ್ಪ, ಸ್ವಾಮಿಗೌಡ, ಭದ್ರೇಶ್ ಬಾಳಗೋಡು, ಗಣಪತಿ ಹೆನಗೆರೆ, ಶ್ರೀಪಾದ ಬಿಚ್ಚುಗತ್ತಿ, ಕವಲಕೋಡು ವೆಂಕಟೇಶ್ ಇದ್ದರು.</strong></p>.<p><strong>ಹೋರಾಟದಲ್ಲಿ ಶತಾಯುಷಿ ಬಂಗಾರಮ್ಮ</strong> </p><p>ಸಾಗರ ತಾಲ್ಲೂಕಿನ ನೇರಲಗಿ ಗ್ರಾಮದ 100 ವರ್ಷದ ವೃದ್ಧೆ ಬಂಗಾರಮ್ಮ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿ ಹೋರಾಟದಲ್ಲಿ ಸೋಮವಾರ ಭಾಗಿಯಾಗಿದ್ದರು. ಯೋಜನೆ ವಿರೋಧಿಸುವ ಸಹಿ ಸಂಗ್ರಹದ ಫಲಕಕ್ಕೆ ತಮ್ಮ ಹೆಬ್ಬೆಟ್ಟು ಒತ್ತುವ ಮೂಲಕ ಅವರು ಯೋಜನೆಗೆ ವಿರೋಧ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>