<p><strong>ಶಿವಮೊಗ್ಗ:</strong> ‘ಸ್ವಾಧೀನವಾಗುವ ಅರಣ್ಯಕ್ಕೆ ಬದಲಿ ಭೂಮಿ ಒದಗಿಸಲು ಕರ್ನಾಟಕ ವಿದ್ಯುತ್ ನಿಗಮಕ್ಕೆ (ಕೆಪಿಸಿ) ಷರತ್ತು ವಿಧಿಸಿ ₹ 8,644 ಕೋಟಿ ವೆಚ್ಚದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ’ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. </p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಪಂಪ್ಡ್ ಸ್ಟೋರೇಜ್ ಯೋಜನೆಗೆ 7 ಕಿ.ಮೀ ಅಂತರದ 10 ಮೀಟರ್ ವ್ಯಾಸದ ಕಾಂಕ್ರೀಟ್ ಸುರಂಗ ಮಾರ್ಗ ನಿರ್ಮಾಣ ಆಗಲಿದ್ದು, ಶೀಘ್ರ ಕಾಮಗಾರಿ ಆರಂಭ<br>ಆಗಲಿದೆ. 34 ಹೆಕ್ಟೇರ್ ಅರಣ್ಯ ಭೂಮಿ 140 ಎಕರೆ ಕಂದಾಯ ಭೂಮಿ ಬಳಕೆಯಾಗುತ್ತಿದೆ’ ಎಂದರು.</p>.<p>‘ಸಾಗರ ತಾಲ್ಲೂಕಿನ ಹೆನ್ನೆ ಭಾಗದಲ್ಲಿ ರೈತರ 8.32 ಎಕರೆ ಮಾತ್ರ ಸ್ವಾಧೀನ ಆಗಲಿದೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಪಡೆಯಲು ಒಪ್ಪಿಸಿದ್ದೇವೆ. ಸಂತ್ರಸ್ತರ ಕುಟುಂಬದವರಿಗೆ ಕೆಪಿಸಿಯಲ್ಲಿ ಉದ್ಯೋಗ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>‘ಈ ಯೋಜನೆಯಿಂದ ಪರಿಸರ ನಾಶವಾಗಲಿದೆ ಎಂಬ ವೃಥಾ ಆರೋಪ ಸಲ್ಲ. ಕೇಂದ್ರ ಸರ್ಕಾರದ ಹೆದ್ದಾರಿ ಯೋಜನೆಗಳಲ್ಲಿ ಸಾವಿರಾರು ಮರಗಳು ಬಲಿ ಆಗಿವೆ. ಅದನ್ನು ಕಂಡೂ ಪರಿಸರವಾದಿಗಳು ಏಕೆ ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದು ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಸ್ವಾಧೀನವಾಗುವ ಅರಣ್ಯಕ್ಕೆ ಬದಲಿ ಭೂಮಿ ಒದಗಿಸಲು ಕರ್ನಾಟಕ ವಿದ್ಯುತ್ ನಿಗಮಕ್ಕೆ (ಕೆಪಿಸಿ) ಷರತ್ತು ವಿಧಿಸಿ ₹ 8,644 ಕೋಟಿ ವೆಚ್ಚದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ’ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. </p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಪಂಪ್ಡ್ ಸ್ಟೋರೇಜ್ ಯೋಜನೆಗೆ 7 ಕಿ.ಮೀ ಅಂತರದ 10 ಮೀಟರ್ ವ್ಯಾಸದ ಕಾಂಕ್ರೀಟ್ ಸುರಂಗ ಮಾರ್ಗ ನಿರ್ಮಾಣ ಆಗಲಿದ್ದು, ಶೀಘ್ರ ಕಾಮಗಾರಿ ಆರಂಭ<br>ಆಗಲಿದೆ. 34 ಹೆಕ್ಟೇರ್ ಅರಣ್ಯ ಭೂಮಿ 140 ಎಕರೆ ಕಂದಾಯ ಭೂಮಿ ಬಳಕೆಯಾಗುತ್ತಿದೆ’ ಎಂದರು.</p>.<p>‘ಸಾಗರ ತಾಲ್ಲೂಕಿನ ಹೆನ್ನೆ ಭಾಗದಲ್ಲಿ ರೈತರ 8.32 ಎಕರೆ ಮಾತ್ರ ಸ್ವಾಧೀನ ಆಗಲಿದೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಪಡೆಯಲು ಒಪ್ಪಿಸಿದ್ದೇವೆ. ಸಂತ್ರಸ್ತರ ಕುಟುಂಬದವರಿಗೆ ಕೆಪಿಸಿಯಲ್ಲಿ ಉದ್ಯೋಗ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>‘ಈ ಯೋಜನೆಯಿಂದ ಪರಿಸರ ನಾಶವಾಗಲಿದೆ ಎಂಬ ವೃಥಾ ಆರೋಪ ಸಲ್ಲ. ಕೇಂದ್ರ ಸರ್ಕಾರದ ಹೆದ್ದಾರಿ ಯೋಜನೆಗಳಲ್ಲಿ ಸಾವಿರಾರು ಮರಗಳು ಬಲಿ ಆಗಿವೆ. ಅದನ್ನು ಕಂಡೂ ಪರಿಸರವಾದಿಗಳು ಏಕೆ ಕಣ್ಣು ಮುಚ್ಚಿ ಕುಳಿತಿದ್ದಾರೆ’ ಎಂದು ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>