<p><strong>ಸಾಗರ</strong>: ರಾಜ್ಯ ಸರ್ಕಾರ ಕೈಗೊಳ್ಳಲು ಮುಂದಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿ– ಕಣಿವೆ ಉಳಿಸಿ ಹೋರಾಟ ಒಕ್ಕೂಟ ತೀರ್ಮಾನಿಸಿದೆ.</p>.<p>ಇಲ್ಲಿನ ನಗರಸಭೆಯ ಬಯಲು ರಂಗಮಂದಿರದಲ್ಲಿ ಸೋಮವಾರ ನಡೆದ ಒಕ್ಕೂಟದ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಯೋಜನೆ ವಿರುದ್ಧ ಜನ ಜಾಗೃತಿ ಮೂಡಿಸಲು ಸಾಗರದಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲು ನಿರ್ಣಯಿಸಲಾಗಿದೆ.</p>.<p>ಪ್ರತಿಭಟನಾ ಸಭೆಗೆ ಜಿಲ್ಲೆಯ ವಿವಿಧ ಮಠಾಧೀಶರು, ರಾಜಕೀಯ ಪಕ್ಷಗಳ, ಸಂಘ ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಪಕ್ಷಾತೀತ, ಜಾತ್ಯತೀತವಾಗಿ ಆಂದೋಲನ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಈಗಾಗಲೇ ಉತ್ತರ ಕನ್ನಡ ಜಿಲ್ಲೆ ಹಾಗೂ ಶಿವಮೊಗ್ಗದಲ್ಲಿ ಒಕ್ಕೂಟದ ವತಿಯಿಂದ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆದಿದ್ದರೂ ಜನಪ್ರತಿನಿಧಿಗಳು ಹೋರಾಟ ನಡೆಸಿದವರ ಅಹವಾಲು ಕೇಳಲು ಕೂಡ ಮುಂದಾಗದೆ ಇರುವ ನಡೆ ಕುರಿತು ಸಭೆಯಲ್ಲಿ ಖಂಡನೆ ವ್ಯಕ್ತವಾಯಿತು.</p>.<p>ಯೋಜನಾ ಪ್ರದೇಶದ ಸ್ಥಳೀಯ ಸಂಸ್ಥೆಗಳ, ಸ್ಥಳೀಯ ಜನರ ಅಭಿಪ್ರಾಯವನ್ನು ಪಡೆಯದೆ, ಸತ್ಯಾಂಶವನ್ನು ಮುಚ್ಚಿಟ್ಟು ಶರಾವತಿ ನದಿ ಅಸ್ತಿತ್ವಕ್ಕೆ ಸಂಚಕಾರ ತರುವ, ಪಶ್ಚಿಮಘಟ್ಟಕ್ಕೆ ಕುತ್ತು ಉಂಟು ಮಾಡುವ ಯೋಜನೆ ಜಾರಿಗೆ ಸರ್ಕಾರ ಮುಂದಾಗಿರುವುದಕ್ಕೆ ಸಭೆಯಲ್ಲಿ ವಿರೋಧ ಸೂಚಿಸಲಾಯಿತು.</p>.<p>ಒಕ್ಕೂಟದ ಪ್ರಮುಖರಾದ ಅಖಿಲೇಶ್ ಚಿಪ್ಪಳಿ, ಶಿವಾನಂದ ಕುಗ್ವೆ, ವೆಂಕಟೇಶ್ ಕವಲಕೋಡು, ಧನುಷ್ ಕುಮಾರ್, ನಾರಾಯಣ ಮೂರ್ತಿ, ಮ.ಸ.ನಂಜುಂಡಸ್ವಾಮಿ, ಶ್ರೀಧರ ಭಾಗವತ್, ಭಾಗೀರಥಿ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ರಾಜ್ಯ ಸರ್ಕಾರ ಕೈಗೊಳ್ಳಲು ಮುಂದಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿ– ಕಣಿವೆ ಉಳಿಸಿ ಹೋರಾಟ ಒಕ್ಕೂಟ ತೀರ್ಮಾನಿಸಿದೆ.</p>.<p>ಇಲ್ಲಿನ ನಗರಸಭೆಯ ಬಯಲು ರಂಗಮಂದಿರದಲ್ಲಿ ಸೋಮವಾರ ನಡೆದ ಒಕ್ಕೂಟದ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಯೋಜನೆ ವಿರುದ್ಧ ಜನ ಜಾಗೃತಿ ಮೂಡಿಸಲು ಸಾಗರದಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲು ನಿರ್ಣಯಿಸಲಾಗಿದೆ.</p>.<p>ಪ್ರತಿಭಟನಾ ಸಭೆಗೆ ಜಿಲ್ಲೆಯ ವಿವಿಧ ಮಠಾಧೀಶರು, ರಾಜಕೀಯ ಪಕ್ಷಗಳ, ಸಂಘ ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಪಕ್ಷಾತೀತ, ಜಾತ್ಯತೀತವಾಗಿ ಆಂದೋಲನ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಈಗಾಗಲೇ ಉತ್ತರ ಕನ್ನಡ ಜಿಲ್ಲೆ ಹಾಗೂ ಶಿವಮೊಗ್ಗದಲ್ಲಿ ಒಕ್ಕೂಟದ ವತಿಯಿಂದ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆದಿದ್ದರೂ ಜನಪ್ರತಿನಿಧಿಗಳು ಹೋರಾಟ ನಡೆಸಿದವರ ಅಹವಾಲು ಕೇಳಲು ಕೂಡ ಮುಂದಾಗದೆ ಇರುವ ನಡೆ ಕುರಿತು ಸಭೆಯಲ್ಲಿ ಖಂಡನೆ ವ್ಯಕ್ತವಾಯಿತು.</p>.<p>ಯೋಜನಾ ಪ್ರದೇಶದ ಸ್ಥಳೀಯ ಸಂಸ್ಥೆಗಳ, ಸ್ಥಳೀಯ ಜನರ ಅಭಿಪ್ರಾಯವನ್ನು ಪಡೆಯದೆ, ಸತ್ಯಾಂಶವನ್ನು ಮುಚ್ಚಿಟ್ಟು ಶರಾವತಿ ನದಿ ಅಸ್ತಿತ್ವಕ್ಕೆ ಸಂಚಕಾರ ತರುವ, ಪಶ್ಚಿಮಘಟ್ಟಕ್ಕೆ ಕುತ್ತು ಉಂಟು ಮಾಡುವ ಯೋಜನೆ ಜಾರಿಗೆ ಸರ್ಕಾರ ಮುಂದಾಗಿರುವುದಕ್ಕೆ ಸಭೆಯಲ್ಲಿ ವಿರೋಧ ಸೂಚಿಸಲಾಯಿತು.</p>.<p>ಒಕ್ಕೂಟದ ಪ್ರಮುಖರಾದ ಅಖಿಲೇಶ್ ಚಿಪ್ಪಳಿ, ಶಿವಾನಂದ ಕುಗ್ವೆ, ವೆಂಕಟೇಶ್ ಕವಲಕೋಡು, ಧನುಷ್ ಕುಮಾರ್, ನಾರಾಯಣ ಮೂರ್ತಿ, ಮ.ಸ.ನಂಜುಂಡಸ್ವಾಮಿ, ಶ್ರೀಧರ ಭಾಗವತ್, ಭಾಗೀರಥಿ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>