<p><strong>ಸಾಗರ</strong> : ಜೋಗ ಸಮೀಪ ನಿರ್ಮಿಸಲು ಉದ್ದೇಶಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನಾ ಪ್ರದೇಶಕ್ಕೆ ಭೇಟಿ ನೀಡಲು ಶನಿವಾರ ಬಂದಿದ್ದ ಕೇಂದ್ರ ವನ್ಯಜೀವಿ ಮಂಡಳಿ ತಂಡವನ್ನು ಸಾಗರ ಪ್ರವಾಸಿ ಮಂದಿರದಲ್ಲಿ ಪರಿಸರವಾದಿಗಳು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>ಮಂಡಳಿಯ ಸದಸ್ಯರಾದ ಹರಿಶಂಕರ್ ಸಿಂಗ್ ಮತ್ತು ರಮಣ್ ಸುಕುಮಾರ್, ರಾಷ್ಟ್ರೀಯ ಹುಲಿ ಪ್ರಾಧಿಕಾರದ ಅಧಿಕಾರಿ ಶಿವಕುಮಾರ್ ಅವರನ್ನು ಒಳಗೊಂಡ ತಂಡದ ಜೊತೆ ಪರಿಸರವಾದಿಗಳು ಯೋಜನೆ ಕುರಿತು ಚರ್ಚೆ ನಡೆಸಿದರು. ನಂತರ ಅಹವಾಲು ಸಲ್ಲಿಸಿದರು.</p>.<p>ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ, ಜನಸಂಗ್ರಾಮ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಅಖಿಲೇಶ್ ಚಿಪ್ಪಳಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಆಗುವ ಸಾಧಕ ಬಾಧಕಗಳ ಕುರಿತು ತಂಡದ ಗಮನ ಸೆಳೆದರು.</p>.<p>ನಿವೃತ್ತ ನ್ಯಾಯಾಧೀಶರಾದ ಸಿ.ಬಿ.ಮನೋಹರ ಕುಮಾರ್ ಯೋಜನೆ ವಿರುದ್ದ ತಮ್ಮ ಅಹವಾಲು ಸಲ್ಲಿಸಿದರು.</p>.<p>ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಮುಖರಾದ ಶಂಕರ ಶರ್ಮ, ಚಂದ್ರಕಾಂತ್ ಕೊಚ್ರೇಕರ್, ಅಜಿತ್ ಹೆಗಡೆ, ಪ್ರೊ. ಬಿ.ಎಂ.ಕುಮಾರಸ್ವಾಮಿ, ಡಾ. ಶ್ರೀಪತಿ, ಡಾ. ಗಿರೀಶ್ ಜನ್ನೆ, ಡಾ. ಸವಿನಯ, ಅನಂತ ಹೆಗಡೆ ಅಶೀಸರ, ವೆಂಕಟೇಶ್, ಉದಯ್ ಸಾಗರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong> : ಜೋಗ ಸಮೀಪ ನಿರ್ಮಿಸಲು ಉದ್ದೇಶಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನಾ ಪ್ರದೇಶಕ್ಕೆ ಭೇಟಿ ನೀಡಲು ಶನಿವಾರ ಬಂದಿದ್ದ ಕೇಂದ್ರ ವನ್ಯಜೀವಿ ಮಂಡಳಿ ತಂಡವನ್ನು ಸಾಗರ ಪ್ರವಾಸಿ ಮಂದಿರದಲ್ಲಿ ಪರಿಸರವಾದಿಗಳು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>ಮಂಡಳಿಯ ಸದಸ್ಯರಾದ ಹರಿಶಂಕರ್ ಸಿಂಗ್ ಮತ್ತು ರಮಣ್ ಸುಕುಮಾರ್, ರಾಷ್ಟ್ರೀಯ ಹುಲಿ ಪ್ರಾಧಿಕಾರದ ಅಧಿಕಾರಿ ಶಿವಕುಮಾರ್ ಅವರನ್ನು ಒಳಗೊಂಡ ತಂಡದ ಜೊತೆ ಪರಿಸರವಾದಿಗಳು ಯೋಜನೆ ಕುರಿತು ಚರ್ಚೆ ನಡೆಸಿದರು. ನಂತರ ಅಹವಾಲು ಸಲ್ಲಿಸಿದರು.</p>.<p>ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ, ಜನಸಂಗ್ರಾಮ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಅಖಿಲೇಶ್ ಚಿಪ್ಪಳಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಆಗುವ ಸಾಧಕ ಬಾಧಕಗಳ ಕುರಿತು ತಂಡದ ಗಮನ ಸೆಳೆದರು.</p>.<p>ನಿವೃತ್ತ ನ್ಯಾಯಾಧೀಶರಾದ ಸಿ.ಬಿ.ಮನೋಹರ ಕುಮಾರ್ ಯೋಜನೆ ವಿರುದ್ದ ತಮ್ಮ ಅಹವಾಲು ಸಲ್ಲಿಸಿದರು.</p>.<p>ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಮುಖರಾದ ಶಂಕರ ಶರ್ಮ, ಚಂದ್ರಕಾಂತ್ ಕೊಚ್ರೇಕರ್, ಅಜಿತ್ ಹೆಗಡೆ, ಪ್ರೊ. ಬಿ.ಎಂ.ಕುಮಾರಸ್ವಾಮಿ, ಡಾ. ಶ್ರೀಪತಿ, ಡಾ. ಗಿರೀಶ್ ಜನ್ನೆ, ಡಾ. ಸವಿನಯ, ಅನಂತ ಹೆಗಡೆ ಅಶೀಸರ, ವೆಂಕಟೇಶ್, ಉದಯ್ ಸಾಗರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>