<p><strong>ಶಿವಮೊಗ್ಗ:</strong> ಶರಾವತಿ ನೀರನ್ನು ಬೆಂಗಳೂರು ಮಹಾನಗರಕ್ಕೆ ಕೊಂಡೊಯ್ಯುವ ಯೋಜನೆಯನ್ನು ಕೈ ಬಿಡುವಂತೆ ಅರಣ್ಯ, ಜೀವಿಶಾಸ್ತ್ರ ವಿಜ್ಞಾನ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಗೆ ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ ಮಾಡಿದರು.</p>.<p>ಬೆಂಗಳೂರಿನಲ್ಲಿ ಗುರುವಾರ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಂದರ್ಭದಲ್ಲಿ ಅವರು ವೇದಿಕೆಯಲ್ಲಿದ್ದ ಸಚಿವ ಈಶ್ವರ ಖಂಡ್ರೆ ಅವರಿಗೆ ಕೋರಿದರು.</p>.<p>ಮಲೆನಾಡಿನ ಪಶ್ಚಿಮಘಟ್ಟಗಳ ಜೀವವೈವಿಧ್ಯಕ್ಕೆ ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವುದರಿಂದ ತೊಂದರೆಯಾಗಲಿದೆ. ಅರಣ್ಯ ನಾಶವಾಗಲಿದೆ. ಹೀಗಾಗಿ ಯೋಜನೆಯನ್ನು ಕೈಬಿಡಿ ಎಂದು ಆಶೀರ್ವಚನದಲ್ಲಿ ಹೇಳಿದರು.</p>.<p>ವೇದಿಕೆಯಲ್ಲಿ ನಿವೃತ್ತ ಪೋಲಿಸ್ ಮಹಾನಿರ್ದೇಶಕ ಎಲ್. ರೇವಣಸಿದ್ಧಯ್ಯ, ಕೆಎಸ್ಆರ್ಪಿ ಐಜಿಪಿ ಸಂದೀಪ್ ಪಾಟೀಲ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಶರಾವತಿ ನೀರನ್ನು ಬೆಂಗಳೂರು ಮಹಾನಗರಕ್ಕೆ ಕೊಂಡೊಯ್ಯುವ ಯೋಜನೆಯನ್ನು ಕೈ ಬಿಡುವಂತೆ ಅರಣ್ಯ, ಜೀವಿಶಾಸ್ತ್ರ ವಿಜ್ಞಾನ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಗೆ ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ ಮಾಡಿದರು.</p>.<p>ಬೆಂಗಳೂರಿನಲ್ಲಿ ಗುರುವಾರ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಂದರ್ಭದಲ್ಲಿ ಅವರು ವೇದಿಕೆಯಲ್ಲಿದ್ದ ಸಚಿವ ಈಶ್ವರ ಖಂಡ್ರೆ ಅವರಿಗೆ ಕೋರಿದರು.</p>.<p>ಮಲೆನಾಡಿನ ಪಶ್ಚಿಮಘಟ್ಟಗಳ ಜೀವವೈವಿಧ್ಯಕ್ಕೆ ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವುದರಿಂದ ತೊಂದರೆಯಾಗಲಿದೆ. ಅರಣ್ಯ ನಾಶವಾಗಲಿದೆ. ಹೀಗಾಗಿ ಯೋಜನೆಯನ್ನು ಕೈಬಿಡಿ ಎಂದು ಆಶೀರ್ವಚನದಲ್ಲಿ ಹೇಳಿದರು.</p>.<p>ವೇದಿಕೆಯಲ್ಲಿ ನಿವೃತ್ತ ಪೋಲಿಸ್ ಮಹಾನಿರ್ದೇಶಕ ಎಲ್. ರೇವಣಸಿದ್ಧಯ್ಯ, ಕೆಎಸ್ಆರ್ಪಿ ಐಜಿಪಿ ಸಂದೀಪ್ ಪಾಟೀಲ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>