<p><strong>ಶಿವಮೊಗ್ಗ</strong>: ಜಿಲ್ಲೆಯ ಕಾರ್ಗಲ್ನ ಬಳಿಯ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಿಂದ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ವಿಶ್ವೇಶ್ವರಯ್ಯ ಜಲನಿಗಮ (ವಿಜೆಎನ್ಎಲ್) ಮುಂದಾಗಿದೆ.</p>.<p>ವಿಜೆಎನ್ಎಲ್ ಕಾರ್ಯಸಾಧ್ಯತಾ ವರದಿ ಸಲ್ಲಿಕೆಗೆ ಬೆಂಗಳೂರಿನ ಈಐ ಟೆಕ್ನಾಲಜೀಸ್ ಸಂಸ್ಥೆಗೆ ಹೊಣೆ ವಹಿಸಿದೆ. ಮೂರರಿಂದ ನಾಲ್ಕು ತಿಂಗಳಲ್ಲಿ ಸಂಸ್ಥೆ ವರದಿ ನೀಡಬಹುದು ಎಂದು ತಿಳಿದುಬಂದಿದೆ.</p>.<p>2018ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶರಾವತಿ ನೀರನ್ನು ಬೆಂಗಳೂರಿಗೆ ಪೂರೈಸುವ ಪ್ರಸ್ತಾಪ ಮುನ್ನೆಲೆಗೆ ಬಂದಿತ್ತು. ಆದರೆ, ಪರಿಸರಾಸಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿ, ಶಿವಮೊಗ್ಗ ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಮತ್ತೆ ಆ ಯೋಜನೆಗೆ ಜೀವ ನೀಡಲಾಗಿದೆ. ಶರಾವತಿಯ 15 ಟಿಎಂಸಿ ಅಡಿ ನೀರನ್ನು ಬೆಂಗಳೂರಿಗೆ ಪೂರೈಸಲು ಜಲಮಂಡಳಿ ಆಸಕ್ತಿ ತೋರಿದೆ.</p>.<p>ಕಾರ್ಯಸಾಧ್ಯತಾ ವರದಿ ಪಡೆಯಲು ಟೆಂಡರ್ ಕರೆಯಲಾಗಿದೆ. ವರದಿ ಬಂದ ನಂತರ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ವಿಶ್ವೇಶ್ವರಯ್ಯ ಜಲನಿಗಮದ ಎಂಜಿನಿಯರ್ ವರದಯ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಜಿಲ್ಲೆಯ ಕಾರ್ಗಲ್ನ ಬಳಿಯ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಿಂದ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ವಿಶ್ವೇಶ್ವರಯ್ಯ ಜಲನಿಗಮ (ವಿಜೆಎನ್ಎಲ್) ಮುಂದಾಗಿದೆ.</p>.<p>ವಿಜೆಎನ್ಎಲ್ ಕಾರ್ಯಸಾಧ್ಯತಾ ವರದಿ ಸಲ್ಲಿಕೆಗೆ ಬೆಂಗಳೂರಿನ ಈಐ ಟೆಕ್ನಾಲಜೀಸ್ ಸಂಸ್ಥೆಗೆ ಹೊಣೆ ವಹಿಸಿದೆ. ಮೂರರಿಂದ ನಾಲ್ಕು ತಿಂಗಳಲ್ಲಿ ಸಂಸ್ಥೆ ವರದಿ ನೀಡಬಹುದು ಎಂದು ತಿಳಿದುಬಂದಿದೆ.</p>.<p>2018ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶರಾವತಿ ನೀರನ್ನು ಬೆಂಗಳೂರಿಗೆ ಪೂರೈಸುವ ಪ್ರಸ್ತಾಪ ಮುನ್ನೆಲೆಗೆ ಬಂದಿತ್ತು. ಆದರೆ, ಪರಿಸರಾಸಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿ, ಶಿವಮೊಗ್ಗ ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಮತ್ತೆ ಆ ಯೋಜನೆಗೆ ಜೀವ ನೀಡಲಾಗಿದೆ. ಶರಾವತಿಯ 15 ಟಿಎಂಸಿ ಅಡಿ ನೀರನ್ನು ಬೆಂಗಳೂರಿಗೆ ಪೂರೈಸಲು ಜಲಮಂಡಳಿ ಆಸಕ್ತಿ ತೋರಿದೆ.</p>.<p>ಕಾರ್ಯಸಾಧ್ಯತಾ ವರದಿ ಪಡೆಯಲು ಟೆಂಡರ್ ಕರೆಯಲಾಗಿದೆ. ವರದಿ ಬಂದ ನಂತರ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ವಿಶ್ವೇಶ್ವರಯ್ಯ ಜಲನಿಗಮದ ಎಂಜಿನಿಯರ್ ವರದಯ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>