ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕಾರಿಪುರ: ಟಿಎಪಿಸಿಎಂಎಸ್‌ಗೆ ‌ಶಶಿಧರ್‌ ಅಧ್ಯಕ್ಷ

Last Updated 11 ನವೆಂಬರ್ 2020, 16:28 IST
ಅಕ್ಷರ ಗಾತ್ರ

ಶಿಕಾರಿಪುರ: ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚುರ್ಚಿಗುಂಡಿ ಶಶಿಧರ್‌ ಹಾಗೂ ಉಪಾಧ್ಯಕ್ಷರಾಗಿ ಕೆ.ಯು. ಗಂಗಾಧರ್‌ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಡಿಸಿಸಿ ಬ್ಯಾಂಕ್ ಪ್ರಭಾರ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ‘ಟಿಎಪಿಸಿಎಂಎಸ್‌ ರೈತರ ಸಂಸ್ಥೆಯಾಗಿದೆ. ಕಳೆದ ವರ್ಷಗಳಲ್ಲಿ ನಷ್ಟದಲ್ಲಿದ್ದ ಟಿಎಪಿಸಿಎಂಎಸ್‌ ಪ್ರಸ್ತುತ ಲಾಭದಲ್ಲಿದೆ. ನೂತನ ಅಧ್ಯಕ್ಷ ಚುರ್ಚಿಗುಂಡಿ ಶಶಿಧರ್‌ ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ’ ಎಂದರು.

ಅಧ್ಯಕ್ಷ ಚುರ್ಚಿಗುಂಡಿ ಶಶಿಧರ್‌, ‘ಎಲ್ಲಾ ಕೃಷಿ ಪರಿಕರಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ನಿಟ್ಟಿನಲ್ಲಿ ಕೃಷಿ ಮಾಲ್‌ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇನೆ. ಟಿಎಪಿಸಿಎಂಎಸ್‌ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸಹಕಾರ ನೀಡಿದ್ದಾರೆ’ ಎಂದರು.

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜೆ. ಸುಕೇಂದ್ರಪ್ಪ, ರಾಜ್ಯ ಸಹಕಾರ ಕುಕ್ಕುಟ ಮಹಾಮಂಡಳ ಸದಸ್ಯ ಕಬಾಡಿ ರಾಜಪ್ಪ, ಟಿಎಪಿಸಿಎಂಎಸ್‌ ನಿರ್ದೇಶಕರಾದ ಅಗಡಿ ಅಶೋಕ್, ಬಿ.ಡಿ. ಭೂಕಾಂತ್‌, ಚನ್ನಪ್ಪ, ಎಸ್‌.ಎಸ್‌. ರಾಘವೇಂದ್ರ, ಎ.ಬಿ. ಸುಧೀರ್‌, ಹಳ್ಳೂರು ಪರಮೇಶ್ವರಪ್ಪ, ಅನೂಪ್‌, ಸುನಿತಾ, ಪ್ರೇಮಾ, ಬಸವಣ್ಯಪ್ಪ, ಜಯನಾಯ್ಕ, ಸುರೇಶ್‌ಗೌಡ್ರು, ಮಾಜಿ ಅಧ್ಯಕ್ಷ ಬೆಣ್ಣೆ ದೇವೇಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT