<p><strong>ಶಿಕಾರಿಪುರ:</strong> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಪಾಲ್ಗೊಂಡು ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ.</p>.<p>ಪಟ್ಟಣದ ಪ್ರಗತಿ ನಗರದ ಶ್ರೀನಿವಾಸ್ (27) ಗುಂಡು ತಗುಲಿ ಗಾಯಗೊಂಡಿರುವ ಆರೋಪಿ.</p>.<p>ದೂಪದಹಳ್ಳಿ ಸಮೀಪ ಆರೋಪಿಯನ್ನು ಪತ್ತೆಹಚ್ಚಿದ ಮಾಲೂರು ಪೊಲೀಸರು, ಶರಣಾಗುವಂತೆ ಎಚ್ಚರಿಕೆ ನೀಡಿದರು. ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ತೀರ್ಥಹಳ್ಳಿ ತಾಲ್ಲೂಕು ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಮಠದಲ್ಲಿ ಈಚೆಗೆ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.</p>.<p>ಮಾಲೂರು ಪಿಎಸ್ಐ ಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಪಾಲ್ಗೊಂಡು ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ.</p>.<p>ಪಟ್ಟಣದ ಪ್ರಗತಿ ನಗರದ ಶ್ರೀನಿವಾಸ್ (27) ಗುಂಡು ತಗುಲಿ ಗಾಯಗೊಂಡಿರುವ ಆರೋಪಿ.</p>.<p>ದೂಪದಹಳ್ಳಿ ಸಮೀಪ ಆರೋಪಿಯನ್ನು ಪತ್ತೆಹಚ್ಚಿದ ಮಾಲೂರು ಪೊಲೀಸರು, ಶರಣಾಗುವಂತೆ ಎಚ್ಚರಿಕೆ ನೀಡಿದರು. ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ತೀರ್ಥಹಳ್ಳಿ ತಾಲ್ಲೂಕು ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಮಠದಲ್ಲಿ ಈಚೆಗೆ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.</p>.<p>ಮಾಲೂರು ಪಿಎಸ್ಐ ಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>