<p><strong>ಶಿಕಾರಿಪುರ</strong>: ‘ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪರೀಕ್ಷಾ ಪರಿಕರ ವಿತರಿಸಿ ಶಿಕ್ಷಣ ಸಚಿವರ ಹುಟ್ಟುಹಬ್ಬ ಆಚರಿಸುತ್ತಿರುವುದು ಅಭಿಮಾನದ ಸಂಗತಿ’ ಎಂದು ಕಾಂಗ್ರೆಸ್ ಮುಖಂಡ ಸುರೇಶ್ ಗುಡ್ಡಳ್ಳಿ ಹೇಳಿದರು.</p>.<p>ತಾಲ್ಲೂಕಿನ ಕಲ್ಮನೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಉಳ್ಳಿ ಪೌಂಡೇಶನ್ ಆಯೋಜಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರ ವಿತರಿಸಿ ಮಾತನಾಡಿದರು. </p>.<p>ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬಕ್ಕೆ ದುಂದುವೆಚ್ಚ ಮಾಡುವ ಬದಲು ಅದೇ ಹಣ ಬಳಸಿ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಬೇಕು ಎಂದರು.</p>.<p>ಮಧು ಬಂಗಾರಪ್ಪ ಸಚಿವರಾದ ನಂತರ ಪ್ರಾಥಮಿಕ, ಪ್ರೌಢ ಶಿಕ್ಷಣದಲ್ಲಿ ವಿದ್ಯಾರ್ಥಿಪರವಾದ ಬದಲಾವಣೆಗಳನ್ನು ತಂದಿದ್ದಾರೆ. ಉತ್ತಮ ಕೆಲಸಗಳೊಂದಿಗೆ ಶೈಕ್ಷಣಿಕ ಕ್ಷೇತ್ರ ಬಲಗೊಳಿಸುವ ಪ್ರಯತ್ನ ಶ್ಲಾಘನೀಯ. ಅದಕ್ಕಾಗಿ ವಿದ್ಯಾರ್ಥಿಗಳ ನಡುವೆ ಅವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಉಳ್ಳಿ ಪೌಂಡೇಶನ್ನ ದರ್ಶನ್ ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಕೇಕ್ ವಿತರಿಸಲಾಯಿತು. ಮುಖಂಡರಾದ ಬಡಗಿ ಪಾಲಾಕ್ಷಪ್ಪ, ದಯಾನಂದ ಗಾಮ, ವಿರೇಶ್ ಜೋಗಿಹಳ್ಳಿ, ಕುಮಾರ್, ಪರಶುರಾಮ್, ಸಮೀರ್ಅಹಮದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಶರತ್, ಯು.ಕೆ.ಸಾಮ್ರಾಟ್ ಗ್ರಾಮಸ್ಥರು ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ‘ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪರೀಕ್ಷಾ ಪರಿಕರ ವಿತರಿಸಿ ಶಿಕ್ಷಣ ಸಚಿವರ ಹುಟ್ಟುಹಬ್ಬ ಆಚರಿಸುತ್ತಿರುವುದು ಅಭಿಮಾನದ ಸಂಗತಿ’ ಎಂದು ಕಾಂಗ್ರೆಸ್ ಮುಖಂಡ ಸುರೇಶ್ ಗುಡ್ಡಳ್ಳಿ ಹೇಳಿದರು.</p>.<p>ತಾಲ್ಲೂಕಿನ ಕಲ್ಮನೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಉಳ್ಳಿ ಪೌಂಡೇಶನ್ ಆಯೋಜಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರ ವಿತರಿಸಿ ಮಾತನಾಡಿದರು. </p>.<p>ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬಕ್ಕೆ ದುಂದುವೆಚ್ಚ ಮಾಡುವ ಬದಲು ಅದೇ ಹಣ ಬಳಸಿ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಬೇಕು ಎಂದರು.</p>.<p>ಮಧು ಬಂಗಾರಪ್ಪ ಸಚಿವರಾದ ನಂತರ ಪ್ರಾಥಮಿಕ, ಪ್ರೌಢ ಶಿಕ್ಷಣದಲ್ಲಿ ವಿದ್ಯಾರ್ಥಿಪರವಾದ ಬದಲಾವಣೆಗಳನ್ನು ತಂದಿದ್ದಾರೆ. ಉತ್ತಮ ಕೆಲಸಗಳೊಂದಿಗೆ ಶೈಕ್ಷಣಿಕ ಕ್ಷೇತ್ರ ಬಲಗೊಳಿಸುವ ಪ್ರಯತ್ನ ಶ್ಲಾಘನೀಯ. ಅದಕ್ಕಾಗಿ ವಿದ್ಯಾರ್ಥಿಗಳ ನಡುವೆ ಅವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಉಳ್ಳಿ ಪೌಂಡೇಶನ್ನ ದರ್ಶನ್ ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಕೇಕ್ ವಿತರಿಸಲಾಯಿತು. ಮುಖಂಡರಾದ ಬಡಗಿ ಪಾಲಾಕ್ಷಪ್ಪ, ದಯಾನಂದ ಗಾಮ, ವಿರೇಶ್ ಜೋಗಿಹಳ್ಳಿ, ಕುಮಾರ್, ಪರಶುರಾಮ್, ಸಮೀರ್ಅಹಮದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಶರತ್, ಯು.ಕೆ.ಸಾಮ್ರಾಟ್ ಗ್ರಾಮಸ್ಥರು ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>