<p>ಶಿಕಾರಿಪುರ: ಭಗವಂತ ನೀಡಿದ ಕಣ್ಣನ್ನು ರಕ್ಷಣೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಪ್ರಸಾದ್ ನೇತ್ರಾಲಯ ಉಡುಪಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ನೇತ್ರ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಮುಖ್ಯ. ಸಮಾಜ ಅಭಿವೃದ್ಧಿಯತ್ತ ಸಾಗುತ್ತಿದ್ದರೂ ಆರೋಗ್ಯ ಸೇವೆ ಪಡೆಯಲು ಶಕ್ತರು, ಅಶಕ್ತರ ನಡುವಿನ ಕಂದಕ ಹೆಚ್ಚುತ್ತಿದೆ. ಆರೋಗ್ಯ ಉಚಿತ ಸೇವೆಗಳು ಅಭಿವೃದ್ಧಿ ಕಾರ್ಯಗಳಿಗಿಂತಲೂ ಶ್ರೇಷ್ಠವಾದವು ಎಂದರು.</p>.<p>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ ರಾಜ್ಯದಾದ್ಯಂತ ನಡೆಯುತ್ತಿತ್ತು. ಶಿಕಾರಿಪುರ ಕ್ಷೇತ್ರವು ರಾಜ್ಯವೇ ಹೆಮ್ಮೆ ಪಡುವಂತೆ ಪ್ರಗತಿಹೊಂದಿದೆ ಎಂದು ಡಾ. ಕೃಷ್ಣ ಪ್ರಸಾದ್ ಕೂಡ್ಲ ಅಭಿಪ್ರಾಯಪಟ್ಟರು.</p>.<p>ಸಾವಿರಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ಸಡೆಸಲಾಯಿತು.</p>.<p>ಮುಖಂಡರಾದ ಕೆ.ಎಸ್. ಗುರುಮೂರ್ತಿ ವಸಂತಗೌಡ, ಎಂ.ಬಿ. ಚನ್ನವೀರಪ್ಪ, ಹುಲ್ಮಾರ್ ಮಹೇಶ್, ಸಂದೀಪ, ಪಾಲಾಕ್ಷಪ್ಪ, ಈರಣ್ಣ ಗೌಡ, ಪ್ರಸಾದ್ ನೇತ್ರಾಲಯ ಉಡುಪಿಯ ಸಿಬ್ಬಂದಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-861176964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಭಗವಂತ ನೀಡಿದ ಕಣ್ಣನ್ನು ರಕ್ಷಣೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಪ್ರಸಾದ್ ನೇತ್ರಾಲಯ ಉಡುಪಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ನೇತ್ರ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಮುಖ್ಯ. ಸಮಾಜ ಅಭಿವೃದ್ಧಿಯತ್ತ ಸಾಗುತ್ತಿದ್ದರೂ ಆರೋಗ್ಯ ಸೇವೆ ಪಡೆಯಲು ಶಕ್ತರು, ಅಶಕ್ತರ ನಡುವಿನ ಕಂದಕ ಹೆಚ್ಚುತ್ತಿದೆ. ಆರೋಗ್ಯ ಉಚಿತ ಸೇವೆಗಳು ಅಭಿವೃದ್ಧಿ ಕಾರ್ಯಗಳಿಗಿಂತಲೂ ಶ್ರೇಷ್ಠವಾದವು ಎಂದರು.</p>.<p>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ ರಾಜ್ಯದಾದ್ಯಂತ ನಡೆಯುತ್ತಿತ್ತು. ಶಿಕಾರಿಪುರ ಕ್ಷೇತ್ರವು ರಾಜ್ಯವೇ ಹೆಮ್ಮೆ ಪಡುವಂತೆ ಪ್ರಗತಿಹೊಂದಿದೆ ಎಂದು ಡಾ. ಕೃಷ್ಣ ಪ್ರಸಾದ್ ಕೂಡ್ಲ ಅಭಿಪ್ರಾಯಪಟ್ಟರು.</p>.<p>ಸಾವಿರಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ಸಡೆಸಲಾಯಿತು.</p>.<p>ಮುಖಂಡರಾದ ಕೆ.ಎಸ್. ಗುರುಮೂರ್ತಿ ವಸಂತಗೌಡ, ಎಂ.ಬಿ. ಚನ್ನವೀರಪ್ಪ, ಹುಲ್ಮಾರ್ ಮಹೇಶ್, ಸಂದೀಪ, ಪಾಲಾಕ್ಷಪ್ಪ, ಈರಣ್ಣ ಗೌಡ, ಪ್ರಸಾದ್ ನೇತ್ರಾಲಯ ಉಡುಪಿಯ ಸಿಬ್ಬಂದಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-861176964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>