<p><strong>ಶಿಕಾರಿಪುರ:</strong> ತಾಲ್ಲೂಕಿನ ಹಿತ್ತಲ ಗ್ರಾಮದಲ್ಲಿ ಭಾನುವಾರ ನಡೆದ ಶ್ರೀ ಬನಶಂಕರಿ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ, ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p><p>ಬ್ರಾಹ್ಮಿ ಮುಹೂರ್ತದಲ್ಲಿ ಗೋಪೂಜೆಯೊಂದಿಗೆ ಸಮುದಾಯ ಭವನ ಪ್ರವೇಶ, ಶ್ರೀದೇವಿಗೆ ಸುಪ್ರಭಾತ ಸೇವೆಯೊಂದಿಗೆ ಗೋಪುರದಲ್ಲಿ ಕಳಸ ಪ್ರತಿಷ್ಠಾಪನೆ, ವೇದಪಾರಾಯಣ, ಪ್ರತಿಷ್ಠಾ ಹೋಮ, ಮಹಾಮಂಗಳಾರತಿ ನಡೆಯಿತು.</p><p>ದಿಂಡದಹಳ್ಳಿ ಹಿರೇಮಠದ ಪಶುಪತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭದ್ರಾವತಿಯ ಕೇಶವ ರಾಮಾನುಜ ಸಂಗಡಿಗರು ಪೌರೋಹಿತ್ಯ ನಡೆಸಿದರು. ಶಾಸಕ ಬಿ.ವೈ.ವಿಜಯೇಂದ್ರ ಸಮುದಾಯ ಭವನ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.</p><p>‘ನೆಮ್ಮದಿ ಹುಡುಕುವ ಭರದಲ್ಲಿ ಜನರು ಒತ್ತಡಕ್ಕೆ ಒಳಗಾಗಿ ದಿನವಿಡೀ ಶ್ರಮಿಸುತ್ತಿದ್ದಾರೆ. ಆದರೆ, ಅದರಿಂದ ದೊರೆಯುವ ಹಣ ಉಳಿದಿರುವ ನೆಮ್ಮದಿಯನ್ನೂ ಕಿತ್ತುಕೊಳ್ಳುತ್ತದೆ. ಪೂಜೆ, ದೈವ ನಂಬಿಕೆ, ಧ್ಯಾನ ಈ ಎಲ್ಲವೂ ಜಂಜಾಟದಿಂದ ನೆಮ್ಮದಿ ಕಡೆ ಕರೆದುಕೊಂಡು ಹೋಗುತ್ತವೆ. ಹಿತ್ತಲ ಗ್ರಾಮಸ್ಥರು ದೇವಸ್ಥಾನ ಗೋಪುರ, ಸಮುದಾಯ ಭವನ ನಿರ್ಮಿಸುವ ಮೂಲಕ ಜನಪರ ಕೆಲಸ ಮಾಡಿದ್ದಾರೆ. ಗ್ರಾಮದ ಎಲ್ಲರಿಗೂ ದೇವರ ಅನುಗ್ರಹ ಸಿಗುವಂತಾಗಲಿ’ ಎಂದು ದೇವಾಂಗ ಸಮಾಜದ ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು.</p><p>ಹಿತ್ತಲ ಗ್ರಾಮದ ದೇವಾಂಗ ಸಮಾಜದ ಅಧ್ಯಕ್ಷ ಮೇಗಲಮನೆ ದೇವೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.</p><p>ಮುಖಂಡರಾದ ಕೆ.ಎಸ್.ಗುರುಮೂರ್ತಿ, ಲೋಕಪ್ಪ, ಗುರುಶಾಂತಪ್ಪ, ಸರ್ವೇಶಪ್ಪ, ರುದ್ರಪ್ಪ, ಶಿವಾನಂದ, ಆನಂದ, ರವಿಕುಮಾರ, ಸುರೇಶ, ಬಸವರಾಜ, ಸುರೇಶ, ಜಯಪ್ಪ, ಮಲ್ಲೇಶ, ತೀರ್ಥಪ್ಪ, ಕೇಶವ, ಪರಶುರಾಮ, ಸುರೇಶ, ಗ್ರಾಮದ ದೇವಾಂಗ ಸಮಾಜ ಬಾಂಧವರು, ಎಲ್ಲ ಸಮಾಜದ ಮುಖಂಡರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ತಾಲ್ಲೂಕಿನ ಹಿತ್ತಲ ಗ್ರಾಮದಲ್ಲಿ ಭಾನುವಾರ ನಡೆದ ಶ್ರೀ ಬನಶಂಕರಿ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ, ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p><p>ಬ್ರಾಹ್ಮಿ ಮುಹೂರ್ತದಲ್ಲಿ ಗೋಪೂಜೆಯೊಂದಿಗೆ ಸಮುದಾಯ ಭವನ ಪ್ರವೇಶ, ಶ್ರೀದೇವಿಗೆ ಸುಪ್ರಭಾತ ಸೇವೆಯೊಂದಿಗೆ ಗೋಪುರದಲ್ಲಿ ಕಳಸ ಪ್ರತಿಷ್ಠಾಪನೆ, ವೇದಪಾರಾಯಣ, ಪ್ರತಿಷ್ಠಾ ಹೋಮ, ಮಹಾಮಂಗಳಾರತಿ ನಡೆಯಿತು.</p><p>ದಿಂಡದಹಳ್ಳಿ ಹಿರೇಮಠದ ಪಶುಪತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭದ್ರಾವತಿಯ ಕೇಶವ ರಾಮಾನುಜ ಸಂಗಡಿಗರು ಪೌರೋಹಿತ್ಯ ನಡೆಸಿದರು. ಶಾಸಕ ಬಿ.ವೈ.ವಿಜಯೇಂದ್ರ ಸಮುದಾಯ ಭವನ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.</p><p>‘ನೆಮ್ಮದಿ ಹುಡುಕುವ ಭರದಲ್ಲಿ ಜನರು ಒತ್ತಡಕ್ಕೆ ಒಳಗಾಗಿ ದಿನವಿಡೀ ಶ್ರಮಿಸುತ್ತಿದ್ದಾರೆ. ಆದರೆ, ಅದರಿಂದ ದೊರೆಯುವ ಹಣ ಉಳಿದಿರುವ ನೆಮ್ಮದಿಯನ್ನೂ ಕಿತ್ತುಕೊಳ್ಳುತ್ತದೆ. ಪೂಜೆ, ದೈವ ನಂಬಿಕೆ, ಧ್ಯಾನ ಈ ಎಲ್ಲವೂ ಜಂಜಾಟದಿಂದ ನೆಮ್ಮದಿ ಕಡೆ ಕರೆದುಕೊಂಡು ಹೋಗುತ್ತವೆ. ಹಿತ್ತಲ ಗ್ರಾಮಸ್ಥರು ದೇವಸ್ಥಾನ ಗೋಪುರ, ಸಮುದಾಯ ಭವನ ನಿರ್ಮಿಸುವ ಮೂಲಕ ಜನಪರ ಕೆಲಸ ಮಾಡಿದ್ದಾರೆ. ಗ್ರಾಮದ ಎಲ್ಲರಿಗೂ ದೇವರ ಅನುಗ್ರಹ ಸಿಗುವಂತಾಗಲಿ’ ಎಂದು ದೇವಾಂಗ ಸಮಾಜದ ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು.</p><p>ಹಿತ್ತಲ ಗ್ರಾಮದ ದೇವಾಂಗ ಸಮಾಜದ ಅಧ್ಯಕ್ಷ ಮೇಗಲಮನೆ ದೇವೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.</p><p>ಮುಖಂಡರಾದ ಕೆ.ಎಸ್.ಗುರುಮೂರ್ತಿ, ಲೋಕಪ್ಪ, ಗುರುಶಾಂತಪ್ಪ, ಸರ್ವೇಶಪ್ಪ, ರುದ್ರಪ್ಪ, ಶಿವಾನಂದ, ಆನಂದ, ರವಿಕುಮಾರ, ಸುರೇಶ, ಬಸವರಾಜ, ಸುರೇಶ, ಜಯಪ್ಪ, ಮಲ್ಲೇಶ, ತೀರ್ಥಪ್ಪ, ಕೇಶವ, ಪರಶುರಾಮ, ಸುರೇಶ, ಗ್ರಾಮದ ದೇವಾಂಗ ಸಮಾಜ ಬಾಂಧವರು, ಎಲ್ಲ ಸಮಾಜದ ಮುಖಂಡರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>