<p><strong>ಶಿಕಾರಿಪುರ</strong>: ಮುಖ್ಯಮಂತ್ರಿ ತವರು ಶಿಕಾರಿಪುರ ಪುರಸಭೆ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಕೊನೆಗೂ ಬಿಜೆಪಿ ಯಶಸ್ವಿಯಾಯಿತು. ಪುರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮಿ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಸೋಮವಾರ ಆಯ್ಕೆಯಾದರು.</p>.<p>23 ಸದಸ್ಯ ಬಲದ ಪುರಸಭೆಗೆ16 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. 8 ಬಿಜೆಪಿ, ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಈ ಫಲಿತಾಂಶದಿಂದ ಯಡಿಯೂರಪ್ಪ ಅವರಿಗೆ ಮುಖಭಂಗವಾಗಿತ್ತು.</p>.<p>ಮೀಸಲಾತಿ ವಿವಾದ ಸೇರಿ ವಿವಿಧ ಕಾರಣಗಳಿಗೆ 16 ತಿಂಗಳಿನಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯೇ ನಡೆದಿರಲಿಲ್ಲ. ಈ ಮಧ್ಯೆ ಕಾಂಗ್ರೆಸ್ನ ಮೂವರು ರಾಜೀನಾಮೆ ನೀಡಿದ್ದು, ಆ ಪಕ್ಷದ ಬಲ 9ಕ್ಕೆ ಕುಸಿದಿತ್ತು. ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರು.</p>.<p>ಸಂಸದ ಬಿ.ವೈ.ರಾಘವೇಂದ್ರ ಅವರ ಮತ ಸೇರಿ ಬಿಜೆಪಿಯ 9, ಮೂವರು ಪಕ್ಷೇತರರು ಸೇರಿ ಬಿಜೆಪಿ ಅಭ್ಯರ್ಥಿಗಳು 12 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗಳು 9 ಮತಗಳನ್ನು ಪಡೆದರು.</p>.<p class="Subhead">ಕಪ್ಪು ಪಟ್ಟಿ ಪ್ರದರ್ಶನ: ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಹಣದ ಆಮಿಷ ಒಡ್ಡಿ ಮೂವರು ಕಾಂಗ್ರೆಸ್ ಸದಸ್ಯರ ರಾಜೀನಾಮೆ ಕೊಡಿಸಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ಮುಖ್ಯಮಂತ್ರಿ ತವರು ಶಿಕಾರಿಪುರ ಪುರಸಭೆ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಕೊನೆಗೂ ಬಿಜೆಪಿ ಯಶಸ್ವಿಯಾಯಿತು. ಪುರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮಿ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಸೋಮವಾರ ಆಯ್ಕೆಯಾದರು.</p>.<p>23 ಸದಸ್ಯ ಬಲದ ಪುರಸಭೆಗೆ16 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. 8 ಬಿಜೆಪಿ, ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಈ ಫಲಿತಾಂಶದಿಂದ ಯಡಿಯೂರಪ್ಪ ಅವರಿಗೆ ಮುಖಭಂಗವಾಗಿತ್ತು.</p>.<p>ಮೀಸಲಾತಿ ವಿವಾದ ಸೇರಿ ವಿವಿಧ ಕಾರಣಗಳಿಗೆ 16 ತಿಂಗಳಿನಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯೇ ನಡೆದಿರಲಿಲ್ಲ. ಈ ಮಧ್ಯೆ ಕಾಂಗ್ರೆಸ್ನ ಮೂವರು ರಾಜೀನಾಮೆ ನೀಡಿದ್ದು, ಆ ಪಕ್ಷದ ಬಲ 9ಕ್ಕೆ ಕುಸಿದಿತ್ತು. ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರು.</p>.<p>ಸಂಸದ ಬಿ.ವೈ.ರಾಘವೇಂದ್ರ ಅವರ ಮತ ಸೇರಿ ಬಿಜೆಪಿಯ 9, ಮೂವರು ಪಕ್ಷೇತರರು ಸೇರಿ ಬಿಜೆಪಿ ಅಭ್ಯರ್ಥಿಗಳು 12 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗಳು 9 ಮತಗಳನ್ನು ಪಡೆದರು.</p>.<p class="Subhead">ಕಪ್ಪು ಪಟ್ಟಿ ಪ್ರದರ್ಶನ: ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಹಣದ ಆಮಿಷ ಒಡ್ಡಿ ಮೂವರು ಕಾಂಗ್ರೆಸ್ ಸದಸ್ಯರ ರಾಜೀನಾಮೆ ಕೊಡಿಸಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>