<p><strong>ಶಿಕಾರಿಪುರ</strong>: ನಟ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಅಂತರರಾಷ್ಟ್ರೀಯ ಮಟ್ಟದ ಜಂಗೀಕುಸ್ತಿ ಪಂದ್ಯಾವಳಿ ಪಟ್ಟಣದ ಮಾರಿಕಾಂಬಾ ರಂಗಮಂದಿರದ ಆವರಣದಲ್ಲಿ ಜ.26 ಮಧ್ಯಾಹ್ನ 3ಕ್ಕೆ ನಡೆಯಲಿದೆ ಎಂದು ಕುಸ್ತಿ ಸಮಿತಿ ಅಧ್ಯಕ್ಷ ಸಂದೀಪ್ ಗೋಣಿ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 25 ಜೋಡಿ ಕುಸ್ತಿ ನಡೆಯಲಿದ್ದು, ಕಜಕಸ್ತಾನದ ಕುಸ್ತಿಪಟು ಜಾನ್, ನೇಪಾಳದ ಕುಸ್ತಿಪಟು ದೇವ್ತಾಪ ಸೇರಿದಂತೆ ಸುಪ್ರಸಿದ್ಧ ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. </p>.<p>₹3 ಲಕ್ಷ ಮೊದಲ ಬಹುಮಾನ, ₹1.5 ಲಕ್ಷ ಎರಡನೇ ಬಹುಮಾನ, ₹1 ಲಕ್ಷ ಮೂರನೇ ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಸ್ಥಳೀಯ ಕುಸ್ತಿಪಟುಗಳಿಗೆ ಉತ್ತಮ ಬಹುಮಾನದೊಂದಿಗೆ ಕುಸ್ತಿ ಪಂದ್ಯ ನಡೆಸಲಾಗುವುದು ಎಂದು ಹೇಳಿದರು.</p>.<p>ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ಮುಖಂಡ ಎಂ.ಶ್ರೀಕಾಂತ್, ಗೋಣಿ ಮಾಲತೇಶ್ ಆಗಮಿಸಲಿದ್ದಾರೆ. ಕುಸ್ತಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.</p>.<p>ಎಸ್.ಎಸ್.ರಾಘವೇಂದ್ರ, ಗಿಡ್ಡಪ್ಪ ಮಟ್ಟೇರ್, ರಮೇಶ್, ನವೀನ್ಶೆಟ್ಟಿ, ಸುಹಾಸ್ಭಟ್ಟ ಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ನಟ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಅಂತರರಾಷ್ಟ್ರೀಯ ಮಟ್ಟದ ಜಂಗೀಕುಸ್ತಿ ಪಂದ್ಯಾವಳಿ ಪಟ್ಟಣದ ಮಾರಿಕಾಂಬಾ ರಂಗಮಂದಿರದ ಆವರಣದಲ್ಲಿ ಜ.26 ಮಧ್ಯಾಹ್ನ 3ಕ್ಕೆ ನಡೆಯಲಿದೆ ಎಂದು ಕುಸ್ತಿ ಸಮಿತಿ ಅಧ್ಯಕ್ಷ ಸಂದೀಪ್ ಗೋಣಿ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 25 ಜೋಡಿ ಕುಸ್ತಿ ನಡೆಯಲಿದ್ದು, ಕಜಕಸ್ತಾನದ ಕುಸ್ತಿಪಟು ಜಾನ್, ನೇಪಾಳದ ಕುಸ್ತಿಪಟು ದೇವ್ತಾಪ ಸೇರಿದಂತೆ ಸುಪ್ರಸಿದ್ಧ ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. </p>.<p>₹3 ಲಕ್ಷ ಮೊದಲ ಬಹುಮಾನ, ₹1.5 ಲಕ್ಷ ಎರಡನೇ ಬಹುಮಾನ, ₹1 ಲಕ್ಷ ಮೂರನೇ ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಸ್ಥಳೀಯ ಕುಸ್ತಿಪಟುಗಳಿಗೆ ಉತ್ತಮ ಬಹುಮಾನದೊಂದಿಗೆ ಕುಸ್ತಿ ಪಂದ್ಯ ನಡೆಸಲಾಗುವುದು ಎಂದು ಹೇಳಿದರು.</p>.<p>ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ಮುಖಂಡ ಎಂ.ಶ್ರೀಕಾಂತ್, ಗೋಣಿ ಮಾಲತೇಶ್ ಆಗಮಿಸಲಿದ್ದಾರೆ. ಕುಸ್ತಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.</p>.<p>ಎಸ್.ಎಸ್.ರಾಘವೇಂದ್ರ, ಗಿಡ್ಡಪ್ಪ ಮಟ್ಟೇರ್, ರಮೇಶ್, ನವೀನ್ಶೆಟ್ಟಿ, ಸುಹಾಸ್ಭಟ್ಟ ಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>