<p><strong>ಶಿವಮೊಗ್ಗ:</strong> ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯದವರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಸತ್ಯಾಗ್ರಹ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯ ಭಾಗವಾಗಿ ಮೀಸಲಾತಿಯ ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸವಳಂಗ ರಸ್ತೆಯಲ್ಲಿ ಮೀಸಲಾತಿಯ ಶವಯಾತ್ರೆ ನಡೆಸಲಾಯಿತು. ಶಿವಮೂರ್ತಿ ಸರ್ಕಲ್ನಲ್ಲಿ ಅಣಕು ಶವವನ್ನು ಇರಿಸಿ ಘೋಷಣೆ ಕೂಗಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶವಯಾತ್ರೆ ಮುಂದುವರೆಸಿದರು.</p>.<h2>ಟ್ರ್ಯಾಕ್ಟರ್ ಅಡ್ಡ ನಿಲ್ಲಿಸಿ ರಸ್ತೆ ತಡೆ</h2>.<p>ಶಿವಮೂರ್ತಿ ವೃತ್ತದಲ್ಲಿ ಎಲ್ಲ ಕಡೆ ಟ್ರ್ಯಾಕ್ಟರ್ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ರಸ್ತೆ ತಡೆ ನಡೆಸಲಾಯಿತು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ, ಜಯನಗರ ಮುಖ್ಯ ರಸ್ತೆಯಲ್ಲಿ ವಾಹನಗಳು ಸರತಿಯಲ್ಲಿ ನಿಲ್ಲುವಂತಾಯಿತು.</p>.<p>ಈ ವೇಳೆ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿಯ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ಮೀಸಲಾತಿಯ ಶವಯಾತ್ರೆ ಮಾಡುತ್ತಿದ್ದೇವೆ ಎಂದರು.</p>.<p>ಪ್ರತಿಭಟನೆಯಲ್ಲಿ ಸಿದ್ದಾಪುರ, ರಾಮನಕೊಪ್ಪ, ವೀರಾಪುರ, ಸಿರಿಯೂರು, ಬಿಳಕಿ, ಹೆಬ್ಬಂಡಿ ಕೋಮಾರನಹಳ್ಳಿ, ಬಾಬಳ್ಳಿ, ನಾಗತಿ ಬೆಳಗಲು, ಹೊಸಹಳ್ಳಿ, ಚಿಕ್ಕಮರಡಿ, ಕಾಟಿಕೆರೆ, ಅಬ್ಬಲಗೆರೆ, ಹುಣಸೋಡು, ಬಿಕ್ಕೋನಹಳ್ಳಿ ಬೀರನಕೆರೆ, ಮೇಲಿನ ಕುಂಚನಹಳ್ಳಿಯ ನಿವಾಸಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯದವರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಸತ್ಯಾಗ್ರಹ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯ ಭಾಗವಾಗಿ ಮೀಸಲಾತಿಯ ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸವಳಂಗ ರಸ್ತೆಯಲ್ಲಿ ಮೀಸಲಾತಿಯ ಶವಯಾತ್ರೆ ನಡೆಸಲಾಯಿತು. ಶಿವಮೂರ್ತಿ ಸರ್ಕಲ್ನಲ್ಲಿ ಅಣಕು ಶವವನ್ನು ಇರಿಸಿ ಘೋಷಣೆ ಕೂಗಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶವಯಾತ್ರೆ ಮುಂದುವರೆಸಿದರು.</p>.<h2>ಟ್ರ್ಯಾಕ್ಟರ್ ಅಡ್ಡ ನಿಲ್ಲಿಸಿ ರಸ್ತೆ ತಡೆ</h2>.<p>ಶಿವಮೂರ್ತಿ ವೃತ್ತದಲ್ಲಿ ಎಲ್ಲ ಕಡೆ ಟ್ರ್ಯಾಕ್ಟರ್ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ರಸ್ತೆ ತಡೆ ನಡೆಸಲಾಯಿತು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ, ಜಯನಗರ ಮುಖ್ಯ ರಸ್ತೆಯಲ್ಲಿ ವಾಹನಗಳು ಸರತಿಯಲ್ಲಿ ನಿಲ್ಲುವಂತಾಯಿತು.</p>.<p>ಈ ವೇಳೆ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿಯ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ಮೀಸಲಾತಿಯ ಶವಯಾತ್ರೆ ಮಾಡುತ್ತಿದ್ದೇವೆ ಎಂದರು.</p>.<p>ಪ್ರತಿಭಟನೆಯಲ್ಲಿ ಸಿದ್ದಾಪುರ, ರಾಮನಕೊಪ್ಪ, ವೀರಾಪುರ, ಸಿರಿಯೂರು, ಬಿಳಕಿ, ಹೆಬ್ಬಂಡಿ ಕೋಮಾರನಹಳ್ಳಿ, ಬಾಬಳ್ಳಿ, ನಾಗತಿ ಬೆಳಗಲು, ಹೊಸಹಳ್ಳಿ, ಚಿಕ್ಕಮರಡಿ, ಕಾಟಿಕೆರೆ, ಅಬ್ಬಲಗೆರೆ, ಹುಣಸೋಡು, ಬಿಕ್ಕೋನಹಳ್ಳಿ ಬೀರನಕೆರೆ, ಮೇಲಿನ ಕುಂಚನಹಳ್ಳಿಯ ನಿವಾಸಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>