<p><strong>ಶಿವಮೊಗ್ಗ</strong>: ಇಲ್ಲಿನ ಮಲವಗೊಪ್ಪದ ಬಳಿ ಸೋಮವಾರ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಯುವತಿಯ ಮೇಲೆ ನಗರ ಸಾರಿಗೆ ಬಸ್ ಹರಿದು ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ದುಮ್ಮಳ್ಳಿ ಗ್ರಾಮದ ನಿವಾಸಿ ಕವಿತಾ ಬಾಯಿ (26) ಮೃತಪಟ್ಟ ಯುವತಿ. ಕವಿತಾಗೆ ಮದುವೆ ನಿಶ್ಚಯವಾಗಿದ್ದು, 15 ದಿನಗಳಲ್ಲಿ ಹಸೆಮಣೆ ಏರಲಿದ್ದರು ಎಂದು ತಿಳಿದುಬಂದಿದೆ.</p>.<p>ಕವಿತಾ ಬಾಯಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆಂದು ಸಹೋದರ ಸಂತೋಷ್ ಅವರೊಂದಿಗೆ ಬೈಕ್ನಲ್ಲಿ ದುಮ್ಮಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಮಲವಗೊಪ್ಪದ ಬಳಿ ರಾಂಗ್ಸೈಡ್ನಲ್ಲಿ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ.</p>.<p>ಈ ವೇಳೆ ಕವಿತಾ ಬಾಯಿ ಹಾಗೂ ಸಂತೋಷ್ ಬೈಕ್ನಿಂದ ಕೆಳಕ್ಕೆ ಬಿದ್ದಿದ್ದಾರೆ. ಆಗ ಅದೇ ದಾರಿಯಲ್ಲಿ ಬರುತ್ತಿದ್ದ ನಗರ ಸಾರಿಗೆ ಬಸ್ ಕೆಳಗೆ ಬಿದ್ದ ಕವಿತಾ ಬಾಯಿ ಮೇಲೆ ಹಿಂದಿನಿಂದ ಹರಿದಿದೆ. ತೀವ್ರವಾಗಿ ಗಾಯಗೊಂಡ ಕವಿತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಂತೋಷ್ಗೆ ಸಣ್ಣಪುಟ್ಟ ಗಾಯವಾಗಿದೆ. ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ಮಲವಗೊಪ್ಪದ ಬಳಿ ಸೋಮವಾರ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಯುವತಿಯ ಮೇಲೆ ನಗರ ಸಾರಿಗೆ ಬಸ್ ಹರಿದು ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ದುಮ್ಮಳ್ಳಿ ಗ್ರಾಮದ ನಿವಾಸಿ ಕವಿತಾ ಬಾಯಿ (26) ಮೃತಪಟ್ಟ ಯುವತಿ. ಕವಿತಾಗೆ ಮದುವೆ ನಿಶ್ಚಯವಾಗಿದ್ದು, 15 ದಿನಗಳಲ್ಲಿ ಹಸೆಮಣೆ ಏರಲಿದ್ದರು ಎಂದು ತಿಳಿದುಬಂದಿದೆ.</p>.<p>ಕವಿತಾ ಬಾಯಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆಂದು ಸಹೋದರ ಸಂತೋಷ್ ಅವರೊಂದಿಗೆ ಬೈಕ್ನಲ್ಲಿ ದುಮ್ಮಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಮಲವಗೊಪ್ಪದ ಬಳಿ ರಾಂಗ್ಸೈಡ್ನಲ್ಲಿ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ.</p>.<p>ಈ ವೇಳೆ ಕವಿತಾ ಬಾಯಿ ಹಾಗೂ ಸಂತೋಷ್ ಬೈಕ್ನಿಂದ ಕೆಳಕ್ಕೆ ಬಿದ್ದಿದ್ದಾರೆ. ಆಗ ಅದೇ ದಾರಿಯಲ್ಲಿ ಬರುತ್ತಿದ್ದ ನಗರ ಸಾರಿಗೆ ಬಸ್ ಕೆಳಗೆ ಬಿದ್ದ ಕವಿತಾ ಬಾಯಿ ಮೇಲೆ ಹಿಂದಿನಿಂದ ಹರಿದಿದೆ. ತೀವ್ರವಾಗಿ ಗಾಯಗೊಂಡ ಕವಿತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಂತೋಷ್ಗೆ ಸಣ್ಣಪುಟ್ಟ ಗಾಯವಾಗಿದೆ. ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>