<p><strong>ಶಿವಮೊಗ್ಗ</strong>: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.</p><p>ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p><p>ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು ಎಂದು ಶಂಕಿಸಿದ್ದಾರೆ.</p><p>ಏ. 1 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದ ವೈದ್ಯಾಧಿಕಾರಿ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಕಳುಹಿಸಲಾಗಿದೆ. </p><p>ಏ.3 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ವೈದ್ಯಾಧಿಕಾರಿಯಿಂದದ ಚಿಕಿತ್ಸೆ ಕೊಡಿಸಿ ಅವರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.</p><p>ಅಲ್ಲಿ ಏಪ್ರಿಲ್ 25 ರಂದು ಶಸ್ತ್ರ ಚಿಕಿತ್ಸೆ ನಡೆಸಿ ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರ ತೆಗೆಯಲಾಗಿದೆ.</p><p>ಜೈಲಿನಲ್ಲಿ ನಿಷೇಧಿತ ವಸ್ತು ಮೊಬೈಲ್ ಫೋನ್ ಕೈದಿಯ ಹೊಟ್ಟೆಯಲ್ಲಿ ದೊರೆತಿರುವುದರಿಂದ ಆತನ ವಿರುದ್ಧ ಶಿವಮೊಗ್ಗ ಕಾರಾಗೃಹದ ಅಧೀಕ್ಷಕರು ಇಲ್ಲಿನ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.</p><p>ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p><p>ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು ಎಂದು ಶಂಕಿಸಿದ್ದಾರೆ.</p><p>ಏ. 1 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದ ವೈದ್ಯಾಧಿಕಾರಿ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಕಳುಹಿಸಲಾಗಿದೆ. </p><p>ಏ.3 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ವೈದ್ಯಾಧಿಕಾರಿಯಿಂದದ ಚಿಕಿತ್ಸೆ ಕೊಡಿಸಿ ಅವರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.</p><p>ಅಲ್ಲಿ ಏಪ್ರಿಲ್ 25 ರಂದು ಶಸ್ತ್ರ ಚಿಕಿತ್ಸೆ ನಡೆಸಿ ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರ ತೆಗೆಯಲಾಗಿದೆ.</p><p>ಜೈಲಿನಲ್ಲಿ ನಿಷೇಧಿತ ವಸ್ತು ಮೊಬೈಲ್ ಫೋನ್ ಕೈದಿಯ ಹೊಟ್ಟೆಯಲ್ಲಿ ದೊರೆತಿರುವುದರಿಂದ ಆತನ ವಿರುದ್ಧ ಶಿವಮೊಗ್ಗ ಕಾರಾಗೃಹದ ಅಧೀಕ್ಷಕರು ಇಲ್ಲಿನ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>