‘ನಕಲಿ ಚಿನ್ನ ಅಡಮಾನವಿಟ್ಟು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿತ್ತು. ಹೊರ ಜಿಲ್ಲೆಗಳಿಗೆ ಸಾಲ ನೀಡಲಾಗಿದೆ. ಈ ಎಲ್ಲ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಬೇಕು. ಸರ್ಕಾರ ಮೊದಲ ಹೆಜ್ಜೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶ್ಲಾಘಿಸಿದರು.