<p><strong>ಶಿವಮೊಗ್ಗ:</strong> ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.</p>.<p>ತನಿಖೆ ಪೂರ್ಣಗೊಳ್ಳುವವರೆಗೆ ಸಹಕಾರಿ ಕ್ಷೇತ್ರದ ಯಾವುದೇ ಸಹಕಾರ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದುವಂತಿಲ್ಲ ಎಂದು ಸಹಕಾರ ಇಲಾಖೆ ಜಂಟಿ ನಿಬಂಧಕ ಪಾಂಡುರಂಗ ಆದೇಶಿಸಿದ್ದಾರೆ.</p>.<p>2014ರಲ್ಲಿ ಡಿಸಿಸಿ ಬ್ಯಾಂಕ್ ಗಾಂಧಿಬಜಾರ್ ಶಾಖೆಯಲ್ಲಿ ನಡೆದ ಚಿನ್ನ ಅಡಮಾನ ಸಾಲದ ಹಗರಣ, ನಿಯಮ ಮೀರಿ ಜಿಲ್ಲೆಯ ಹೊರಗಿನ ಕೈಗಾರಿಕೆಗಳಿಗೆ ನೀಡಿರುವ ಸಾಲದ ತನಿಖೆಗೆ ಸಹಕಾರಿಯಾಗುವಂತೆ ಈ ಆದೇಶ ಹೊರಡಿಸಲಾಗಿದೆ.</p>.<p><strong>ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆ:</strong> ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಜಣ್ಣ ರೆಡ್ಡಿ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಆ ಸ್ಥಾನಕ್ಕೆ ಸಹಕಾರ ಇಲಾಖೆ ಉಪನಿಬಂಧಕ ನಾಗೇಶ್ ಡೋಂಗ್ರೆ ಅವರನ್ನು ನೇಮಕಗೊಳಿಸಿದೆ.</p>.<p>‘ನಕಲಿ ಚಿನ್ನ ಅಡಮಾನವಿಟ್ಟು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿತ್ತು. ಹೊರ ಜಿಲ್ಲೆಗಳಿಗೆ ಸಾಲ ನೀಡಲಾಗಿದೆ. ಈ ಎಲ್ಲ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಬೇಕು. ಸರ್ಕಾರ ಮೊದಲ ಹೆಜ್ಜೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.</p>.<p>ತನಿಖೆ ಪೂರ್ಣಗೊಳ್ಳುವವರೆಗೆ ಸಹಕಾರಿ ಕ್ಷೇತ್ರದ ಯಾವುದೇ ಸಹಕಾರ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದುವಂತಿಲ್ಲ ಎಂದು ಸಹಕಾರ ಇಲಾಖೆ ಜಂಟಿ ನಿಬಂಧಕ ಪಾಂಡುರಂಗ ಆದೇಶಿಸಿದ್ದಾರೆ.</p>.<p>2014ರಲ್ಲಿ ಡಿಸಿಸಿ ಬ್ಯಾಂಕ್ ಗಾಂಧಿಬಜಾರ್ ಶಾಖೆಯಲ್ಲಿ ನಡೆದ ಚಿನ್ನ ಅಡಮಾನ ಸಾಲದ ಹಗರಣ, ನಿಯಮ ಮೀರಿ ಜಿಲ್ಲೆಯ ಹೊರಗಿನ ಕೈಗಾರಿಕೆಗಳಿಗೆ ನೀಡಿರುವ ಸಾಲದ ತನಿಖೆಗೆ ಸಹಕಾರಿಯಾಗುವಂತೆ ಈ ಆದೇಶ ಹೊರಡಿಸಲಾಗಿದೆ.</p>.<p><strong>ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆ:</strong> ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಜಣ್ಣ ರೆಡ್ಡಿ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಆ ಸ್ಥಾನಕ್ಕೆ ಸಹಕಾರ ಇಲಾಖೆ ಉಪನಿಬಂಧಕ ನಾಗೇಶ್ ಡೋಂಗ್ರೆ ಅವರನ್ನು ನೇಮಕಗೊಳಿಸಿದೆ.</p>.<p>‘ನಕಲಿ ಚಿನ್ನ ಅಡಮಾನವಿಟ್ಟು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿತ್ತು. ಹೊರ ಜಿಲ್ಲೆಗಳಿಗೆ ಸಾಲ ನೀಡಲಾಗಿದೆ. ಈ ಎಲ್ಲ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಬೇಕು. ಸರ್ಕಾರ ಮೊದಲ ಹೆಜ್ಜೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>