ಸ್ಥಳೀಯರ ಮಾಹಿತಿ ಪ್ರಕಾರ ಸ್ಫೋಟವಾದಾಗ ಲಾರಿ ಮೇಲಕ್ಕೆ ಚಿಮ್ಮಿ ಕೆಳಗೆ ಬಿದ್ದಿದೆ. ಭಾರಿ ಶಬ್ದ, ಬೆಳಕು, ದೂಳು ಆವರಿಸಿದೆ. ಯಾವ ಮನೆಗಳೂ ದೊಡ್ಡಮಟ್ಟದ ಹಾನಿಯಾಗಿಲ್ಲ.ಲ್ಲಿನ ವಿದ್ಯುತ್ ಕಂಬಗಳು ಧರೆಗೆ ಉರುಳಿಲ್ಲ. ಸ್ಫೋಟದ ಅಕ್ಕಪಕ್ಕದಲ್ಲಿದ್ದ ವಾಹನಗಳು, ಕ್ರಷರ್ ಯಂತ್ರಗಳು, ಅವುಗಳಿಗೆ ಹಾಕಿರುವ ತಡೆಗೋಡೆಗಲೂ ಸುರಕ್ಷಿತವಾಗಿವೆ. ಆದರೆ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿರುವುದಕ್ಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸುತ್ತಾರೆ ಅಲ್ಲಿನ ನಿವಾಸಿ ಸೋಮ್ಲಾನಾಯ್ಕ.