₹ 1 ಕೋಟಿ ದಾಟಿದ ನೆರವು: ಮೃತ ಹರ್ಷ ಅವರ ಕುಟುಂಬಕ್ಕೆ ಅಪಾರ ಪ್ರಮಾಣದಲ್ಲಿ ನೆರವು ಹರಿದುಬರುತ್ತಿದೆ. ಶುಕ್ರವಾರ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ಆದಿಚುಂಚನಗಿರಿ ಪ್ರಸನ್ನನಾಥ ಸ್ವಾಮೀಜಿ, ಹಂಪಿ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ, ದೊಡ್ಡಬಳ್ಳಾಪುರದ ಬಸವದೇವರ ಮಠದ ನಿಶ್ಚಲ ದೇಶೀಕೇಂದ್ರ ಶ್ರೀ ಮತ್ತಿತರರು ಧನಸಹಾಯ ಮಾಡಿದರು. ಇಲ್ಲಿಯವರೆಗೆ ಹರ್ಷ ಅವರ ತಾಯಿ ಪದ್ಮಾ ಖಾತೆಗೆ ಜಮೆಯಾದ ಹಣ ₹ 1 ಕೋಟಿ ದಾಟಿದೆ. ನೆರವಿನ ಸ್ವಲ್ಪ ಪಾಲನ್ನು ಗಲಭೆಯಲ್ಲಿ ಗಾಯಗೊಂಡ ಹಿಂದೂ ಕಾರ್ಯಕರ್ತರ ಚಿಕಿತ್ಸೆಗೆ ವಿನಿಯೋಗಿಸಲಾಗುವುದು ಎಂದು ಸಹೋದರಿ ಅಶ್ವಿನಿ ಮಾಹಿತಿ ನೀಡಿದರು.