<p><strong>ರಿಪ್ಪನ್ಪೇಟೆ</strong>: 2005–06ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಸಾಗರದ ಎಪಿಎಂಸಿಯೊಂದಿಗೆ ವಿಲೀನಗೊಳಿಸುವ ಸರ್ಕಾರದ ಅವೈಜ್ಞಾನಿಕ ಕ್ರಮ ವಿರೋಧಿಸಿ ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಅರ್.ಎ.ಚಾಬುಸಾಬ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್ ನೇತೃತ್ವದಲ್ಲಿ ಪ್ರತಿಭಟಿಸಿ ನಾಡಕಚೇರಿಗೆ ಮನವಿ ಸಲ್ಲಿಸಲಾಯಿತು.</p>.<p>ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಸ್ತಿತ್ವಕ್ಕೆ ಬಂದ ಮೇಲೆ ಕೃಷಿ ಮಾರುಕಟ್ಟೆಯಲ್ಲಿಯೇ ನ್ಯಾಯಯುತ ಬೆಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದೆ. ವಾರ್ಷಿಕ ಅಂದಾಜು ಸರಾಸರಿ ₹ 5 ಕೋಟಿಯಿಂದ ₹ 6 ಕೋಟಿಗೂ ಅಧಿಕ ಆದಾಯ ಸರ್ಕಾರಕ್ಕೆ ಜಮಾ ಆಗುತ್ತಿದೆ. ಸುವ್ಯವಸ್ಥೆಯ ಮಾರುಕಟ್ಟೆ ಪ್ರಾಂಗಣಗಳು ದಾಸ್ತಾನು ಮಳಿಗೆಗಳಿದ್ದು, ಸರ್ವಕಾಲಕ್ಕೂ ಶೇಖರಿಸಿ ಸಂರಕ್ಷಿಸಬಲ್ಲ ಉನ್ನತ ಮಟ್ಟದ ತಾಂತ್ರಿಕ ಗೋದಾಮು ಹೊಂದಿದೆ ಎಂದರು.</p>.<p>ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಹೊಸನಗರ ಮುಂತಾದ ಊರುಗಳಿಗೆ ಸಂಪರ್ಕ ಕಲ್ಪಿಸುವ ಹೋಬಳಿ ಕೇಂದ್ರವಾದ ರಿಪ್ಪನ್ಪೇಟೆಯಲ್ಲೂ ಅತ್ಯಾಧುನಿಕ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಉನ್ನತ ಶ್ರೇಣಿಯ ತಾಂತ್ರಿಕ ಗೋದಾಮುಗಳು ಹಾಗೂ ಆಹಾರ ಪದಾರ್ಥಗಳು ಕೆಡದಂತೆ ಇಡುವ ಶೈತ್ಯಾಗಾರ ಘಟಕಗಳು ಇರುವುದರಿಂದ ಈ ಭಾಗದ ರೈತರಿಗೆ ಅನುಕೂಲಕವಾಗಿದೆ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.</p>.<p>ರೈತರ ಹಿತಕ್ಕೆ ಧಕ್ಕೆ ತರುವ ಈ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಜೆಡಿಎಸ್ ಮುಖಂಡ ಜಿ.ಎಸ್.ವರದರಾಜ್, ಜನಪರ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ, ಹೋರಾಟಗಾರ ಟಿ.ಆರ್.ಕೃಷ್ಣಪ್ಪ, ಮಂಜೋಜಿರಾವ್, ದೂನ ಕುಮಾರ, ಮಂಜುನಾಥ ಆಚಾರ್ ನೆವಟೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: 2005–06ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಸಾಗರದ ಎಪಿಎಂಸಿಯೊಂದಿಗೆ ವಿಲೀನಗೊಳಿಸುವ ಸರ್ಕಾರದ ಅವೈಜ್ಞಾನಿಕ ಕ್ರಮ ವಿರೋಧಿಸಿ ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಅರ್.ಎ.ಚಾಬುಸಾಬ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್ ನೇತೃತ್ವದಲ್ಲಿ ಪ್ರತಿಭಟಿಸಿ ನಾಡಕಚೇರಿಗೆ ಮನವಿ ಸಲ್ಲಿಸಲಾಯಿತು.</p>.<p>ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಸ್ತಿತ್ವಕ್ಕೆ ಬಂದ ಮೇಲೆ ಕೃಷಿ ಮಾರುಕಟ್ಟೆಯಲ್ಲಿಯೇ ನ್ಯಾಯಯುತ ಬೆಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದೆ. ವಾರ್ಷಿಕ ಅಂದಾಜು ಸರಾಸರಿ ₹ 5 ಕೋಟಿಯಿಂದ ₹ 6 ಕೋಟಿಗೂ ಅಧಿಕ ಆದಾಯ ಸರ್ಕಾರಕ್ಕೆ ಜಮಾ ಆಗುತ್ತಿದೆ. ಸುವ್ಯವಸ್ಥೆಯ ಮಾರುಕಟ್ಟೆ ಪ್ರಾಂಗಣಗಳು ದಾಸ್ತಾನು ಮಳಿಗೆಗಳಿದ್ದು, ಸರ್ವಕಾಲಕ್ಕೂ ಶೇಖರಿಸಿ ಸಂರಕ್ಷಿಸಬಲ್ಲ ಉನ್ನತ ಮಟ್ಟದ ತಾಂತ್ರಿಕ ಗೋದಾಮು ಹೊಂದಿದೆ ಎಂದರು.</p>.<p>ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಹೊಸನಗರ ಮುಂತಾದ ಊರುಗಳಿಗೆ ಸಂಪರ್ಕ ಕಲ್ಪಿಸುವ ಹೋಬಳಿ ಕೇಂದ್ರವಾದ ರಿಪ್ಪನ್ಪೇಟೆಯಲ್ಲೂ ಅತ್ಯಾಧುನಿಕ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಉನ್ನತ ಶ್ರೇಣಿಯ ತಾಂತ್ರಿಕ ಗೋದಾಮುಗಳು ಹಾಗೂ ಆಹಾರ ಪದಾರ್ಥಗಳು ಕೆಡದಂತೆ ಇಡುವ ಶೈತ್ಯಾಗಾರ ಘಟಕಗಳು ಇರುವುದರಿಂದ ಈ ಭಾಗದ ರೈತರಿಗೆ ಅನುಕೂಲಕವಾಗಿದೆ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.</p>.<p>ರೈತರ ಹಿತಕ್ಕೆ ಧಕ್ಕೆ ತರುವ ಈ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಜೆಡಿಎಸ್ ಮುಖಂಡ ಜಿ.ಎಸ್.ವರದರಾಜ್, ಜನಪರ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ, ಹೋರಾಟಗಾರ ಟಿ.ಆರ್.ಕೃಷ್ಣಪ್ಪ, ಮಂಜೋಜಿರಾವ್, ದೂನ ಕುಮಾರ, ಮಂಜುನಾಥ ಆಚಾರ್ ನೆವಟೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>